ಕಾಣಿಯೂರು: ರಕ್ತದಾನ ಮಾಡುವ ಮೂಲಕ ಎಷ್ಟೋ ಜೀವಗಳನ್ನು ಉಳಿಸಲು ಸಾಧ್ಯವಿದೆ. ರಕ್ತದಾನ ಮಾಡಿದರೆ ಮನಸ್ಸು ತೃಪ್ತಿ, ನೆಮ್ಮದಿಯಿಂದ ಇರುತ್ತದೆ. ರಕ್ತದಾನ ಮಾಡುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಸಂಘ ಸಂಸ್ಥೆಗಳು ಆದ್ಯತೆ ನೀಡಬೇಕಾಗಿದೆ ಎಂದು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಹೇಳಿದರು.
ಅವರು ಕೊಡಿಮಾರು ಅಬೀರ ಗೆಳೆಯರ ಬಳಗದ ದಶವರ್ಷದ ಪ್ರಯುಕ್ತ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ, ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಸಹಯೋಗದೊಂದಿಗೆ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕೊಡಿಮಾರು ದೈವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಉದಯ ರೈ ಮಾದೋಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘಟನೆಗಳ ಮೂಲಕ ಸಮಾಜಮುಖಿ, ಮೌಲ್ಯಯುತವಾದ ಕೆಲಸಗಳಲ್ಲಿ ತೊಡಗಿಸಿಕೊಂಡಾಗ ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯವಿದೆ ಎಂದರು.
ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಇಲ್ಲಿಯ ವೈದ್ಯಾಧಿಕಾರಿ ಡಾ| ರಾಮಚಂದ್ರ ಭಟ್ ಮಾಹಿತಿ ನೀಡಿದರು. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಗುರು ಗಿರಿಶಂಕರ ಸುಲಾಯ, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಬೆಳಂದೂರು ‘ಬಿ’ ಒಕ್ಕೂಟದ ಅಧ್ಯಕ್ಷ ವೇಣುಗೋಪಾಲ ಕಳುವಾಜೆ ಶುಭಹಾರೈಸಿದರು. ಗೆಳೆಯರ ಬಳಗದ ಅಧ್ಯಕ್ಷ ಪ್ರಮೋದ್ ನೀರಜರಿ ಉಪಸ್ಥಿತರಿದ್ದರು.
ಗೆಳೆಯರ ಬಳಗದ ಗೌರವ ಸಲಹೆಗಾರರಾದ ಜಯಂತ ಅಬೀರ ಸ್ವಾಗತಿಸಿ, ವಸಂತ ರೈ ಕಾರ್ಕಳ ವಂದಿಸಿದರು. ಕಾರ್ಯದರ್ಶಿ ರಂಜಿತ್ ಹೊಸೊಕ್ಲು ವಂದಿಸಿದರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…