Advertisement
ಕಾರ್ಯಕ್ರಮಗಳು

ಕೊಡಿಯಾಲ-ಮೂವಪ್ಪೆಯಲ್ಲಿ 4ನೇ ವರ್ಷದ ದೀಪಾವಳಿ ಕ್ರೀಡಾಕೂಟ

Share

ಕೊಡಿಯಾಲ: ಇಲ್ಲಿನ ಸ್ನೇಹಿತರ ಬಳಗ ಕಲ್ಪಡ ಮೂವಪ್ಪೆ ಇದರ ಆಶ್ರಯದಲ್ಲಿ 4ನೇ ವರ್ಷದ ಸಾಮೂಹಿಕ ಕ್ರೀಡಾಕೂಟವು ಮೂವಪ್ಪೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನ.3ರ ರವಿವಾರ ನಡೆಯಲಿದೆ. ಕಾರ್ಯಕ್ರಮವನ್ನು ಬೆಳಿಗ್ಗೆ ರಾಮಚಂದ್ರ ಆಚಾರ್ಯ ಕಲ್ಪಡ ಮಾಲೆತ್ತಾರು ಉದ್ಘಾಟಿಸಲಿದ್ದು, ಕೊಡಿಯಾಲ ಗ್ರಾ.ಪಂ. ಅಧ್ಯಕ್ಷ ಮೋಹನ್ ಸಾಲಿಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಕಾಣಿಯೂರು ಇದರ ಗೌರವಾಧ್ಯಕ್ಷ ಕೃಷ್ಣಪ್ರಸಾದ್ ಭಟ್ ಕಟ್ಟತ್ತಾರು, ಕೊಡಿಯಾಲ ಗ್ರಾ.ಪಂ. ಸದಸ್ಯೆ ರಮಾ ಪಿ.ರೈ, ಮೂವಪ್ಪೆ ಶಾಲಾ ಮುಖ್ಯಗುರು ನಿರ್ಮಲ ಕೆ.ಎಸ್., ಕಲ್ಪಡ ಉಳ್ಳಾಕುಲು ದೈವಸ್ಥಾನದ ಮೊಕ್ತೇಸರ ಶಿವರಾಮ ಉಪಾಧ್ಯಾಯ, ಶಾಲಾ ಎಸ್ ಡಿಎಂಸಿ ಅಧ್ಯಕ್ಷ ವಿಠಲ ಗೌಡ ಭಾಗವಹಿಸಲಿದ್ದಾರೆ.

ಸಂಜೆ ನಡೆಯುವ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹಿತರ ಬಳಗದ ಅಧ್ಯಕ್ಷ ಗಣೇಶ್ ಕಲ್ಪಡ ಅಂಗಾರಡ್ಕ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರಾಷ್ಟ್ರಮಟ್ಟದ ಯುವಸಮ್ಮಾನ್ ಪ್ರಶಸ್ತಿ ವಿಜೇತ, ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಗೌರವಾಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು, ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ, ನಿವೃತ್ತ ಸೈನಿಕ ರವೀಂದ್ರ ಗೌಡ ರಾಮಕುಮೇರಿ, ಕೊಡಿಯಾಲ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷ ಆನಂದ ಗೌಡ, ಕೊಡಿಯಾಲ ಶಾರಾದೋತ್ಸವ ಸಮಿತಿ ಅಧ್ಯಕ್ಷ ವಿಜಯಚಂದ್ರ ಪೈ ಬಾಚೋಡಿ ಭಾಗವಹಿಸಲಿದ್ದಾರೆ.

ಸ್ಪರ್ಧೆಗಳ ವಿವರ: ಪುರುಷರಿಗೆ ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗಜಗ್ಗಾಟ, ಮಕ್ಕಳಿಗೆ ಓಟ, ಚೆಂಡೆಸೆತ, ಕೆರೆದಡ, ಕಪ್ಪೆಜಿಗಿತ ಮುಂತಾದ ಸ್ಪರ್ಧೆಗಳು ನಡೆಯಲಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

3 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

4 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

4 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

12 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

13 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

13 hours ago