Advertisement
ಕಾರ್ಯಕ್ರಮಗಳು

ಕೊಡಿಯಾಲ-ಮೂವಪ್ಪೆಯಲ್ಲಿ 4ನೇ ವರ್ಷದ ದೀಪಾವಳಿ ಕ್ರೀಡಾಕೂಟ

Share

ಕೊಡಿಯಾಲ: ಇಲ್ಲಿನ ಸ್ನೇಹಿತರ ಬಳಗ ಕಲ್ಪಡ ಮೂವಪ್ಪೆ ಇದರ ಆಶ್ರಯದಲ್ಲಿ 4ನೇ ವರ್ಷದ ಸಾಮೂಹಿಕ ಕ್ರೀಡಾಕೂಟವು ಮೂವಪ್ಪೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನ.3ರ ರವಿವಾರ ನಡೆಯಲಿದೆ. ಕಾರ್ಯಕ್ರಮವನ್ನು ಬೆಳಿಗ್ಗೆ ರಾಮಚಂದ್ರ ಆಚಾರ್ಯ ಕಲ್ಪಡ ಮಾಲೆತ್ತಾರು ಉದ್ಘಾಟಿಸಲಿದ್ದು, ಕೊಡಿಯಾಲ ಗ್ರಾ.ಪಂ. ಅಧ್ಯಕ್ಷ ಮೋಹನ್ ಸಾಲಿಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಕಾಣಿಯೂರು ಇದರ ಗೌರವಾಧ್ಯಕ್ಷ ಕೃಷ್ಣಪ್ರಸಾದ್ ಭಟ್ ಕಟ್ಟತ್ತಾರು, ಕೊಡಿಯಾಲ ಗ್ರಾ.ಪಂ. ಸದಸ್ಯೆ ರಮಾ ಪಿ.ರೈ, ಮೂವಪ್ಪೆ ಶಾಲಾ ಮುಖ್ಯಗುರು ನಿರ್ಮಲ ಕೆ.ಎಸ್., ಕಲ್ಪಡ ಉಳ್ಳಾಕುಲು ದೈವಸ್ಥಾನದ ಮೊಕ್ತೇಸರ ಶಿವರಾಮ ಉಪಾಧ್ಯಾಯ, ಶಾಲಾ ಎಸ್ ಡಿಎಂಸಿ ಅಧ್ಯಕ್ಷ ವಿಠಲ ಗೌಡ ಭಾಗವಹಿಸಲಿದ್ದಾರೆ.

ಸಂಜೆ ನಡೆಯುವ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹಿತರ ಬಳಗದ ಅಧ್ಯಕ್ಷ ಗಣೇಶ್ ಕಲ್ಪಡ ಅಂಗಾರಡ್ಕ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರಾಷ್ಟ್ರಮಟ್ಟದ ಯುವಸಮ್ಮಾನ್ ಪ್ರಶಸ್ತಿ ವಿಜೇತ, ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಗೌರವಾಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು, ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ, ನಿವೃತ್ತ ಸೈನಿಕ ರವೀಂದ್ರ ಗೌಡ ರಾಮಕುಮೇರಿ, ಕೊಡಿಯಾಲ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷ ಆನಂದ ಗೌಡ, ಕೊಡಿಯಾಲ ಶಾರಾದೋತ್ಸವ ಸಮಿತಿ ಅಧ್ಯಕ್ಷ ವಿಜಯಚಂದ್ರ ಪೈ ಬಾಚೋಡಿ ಭಾಗವಹಿಸಲಿದ್ದಾರೆ.

ಸ್ಪರ್ಧೆಗಳ ವಿವರ: ಪುರುಷರಿಗೆ ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗಜಗ್ಗಾಟ, ಮಕ್ಕಳಿಗೆ ಓಟ, ಚೆಂಡೆಸೆತ, ಕೆರೆದಡ, ಕಪ್ಪೆಜಿಗಿತ ಮುಂತಾದ ಸ್ಪರ್ಧೆಗಳು ನಡೆಯಲಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

32 minutes ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

41 minutes ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

5 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

5 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

6 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

21 hours ago