Advertisement
Political mirror

ಕೊನೆಗೂ “ಥಂಡ”ವಾಗಲಿಲ್ಲ ಬಂಡಾಯ…!, ಬಿಜೆಪಿ, ಕಾಂಗ್ರೆಸ್ ಇಲ್ಲ “ಕೂಲ್..ಕೂಲ್”

Share

ಸುಳ್ಯ: ನ.ಪಂ.ಚುನಾವಣೆಯಲ್ಲಿ ಕೆಲವು ವಾರ್ಡ್‍ಗಳಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿದ್ದು ಪಕ್ಷೇತರರಾಗಿ ಕಣದಲ್ಲಿ ಉಳಿದಿರುವುದು ಕಾಂಗ್ರೆಸ್ ಮತ್ತು ಬಿಜೆಪಿಗೆ ಬಂಡಾಯ ತಣ್ಣಗಾಗದ ಹಿನ್ನೆಲೆಯಲ್ಲಿ  ಈ ಬಾರಿ ಕೆಲ ವಾರ್ಡ್ ಗಳಲ್ಲಿ  ಎರಡೂ ಪಕ್ಷಗಳಿಗೆ ಬಿಸಿ ತಟ್ಟಲಿದೆ.

Advertisement
Advertisement

ಬೋರುಗುಡ್ಡೆಯಲ್ಲಿ ಆರ್.ಕೆ.ಮಹಮ್ಮದ್, ಬೂಡು ವಾರ್ಡ್‍ನಲ್ಲಿ ಮಹಮ್ಮದ್ ರಿಯಾಝ್ ಕಟ್ಟೆಕ್ಕಾರ್, ಬೀರಮಂಗಲ ವಾರ್ಡ್‍ನಲ್ಲಿ ಅಬ್ದುಲ್ ರಹಿಮಾನ್ ಎಂ.ಎಂ. ಜಯನಗರ ವಾರ್ಡ್‍ನಲ್ಲಿ ನವೀನ್ ಮಚಾದೋ ಪಕ್ಷೇತರರಾಗಿ ಸ್ಪರ್ಧಿಸುವುದು ಕಾಂಗ್ರೆಸ್‍ಗೆ ಸವಾಲಾಗಲಿದೆ.

ಶಾಂತಿನಗರ ವಾರ್ಡ್‍ನಲ್ಲಿ ಜನಾರ್ಧನ ಬೆಟ್ಟಂಪಾಡಿ ಮತ್ತು 19ನೇ ವಾರ್ಡ್‍ನಲ್ಲಿ ಮೋಹಿನಿ ಎ.ಪಕ್ಷೇತರರಾಗಿ ಸ್ಪರ್ಧಿಸುವುದು ಬಿಜೆಪಿಗೆ ತಲೆ ನೋವು ಸೃಷ್ಠಿಸಲಿದೆ.

ಎರಡೂ ಪಕ್ಷಗಳ ನೇತೃತ್ವ ಕಳೆದ ಕೆಲವು ದಿನಗಳಿಂದದ ನಡೆಸಿದ ಪ್ರಯತ್ನದಿಂದ ತಲಾ ಒಂದೊಂದು ವಾರ್ಡ್‍ಗಳ ಬಂಡಾಯ ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

15ನೇ ವಾರ್ಡ್‍ನಲ್ಲಿ ಪಕ್ಷೇತರನಾಗಿದ್ದ ಅಬ್ದುಲ್ ಮಜೀದ್ ನಾಮಪತ್ರ ಹಿಂಪಡೆದಿರುವುದು ಕಾಂಗ್ರೆಸ್‍ಗೆ ಮತ್ತು 20ನೇ ವಾರ್ಡ್‍ನಲ್ಲಿ ಜಯಂತಿ ಆರ್.ರೈ ನಾಮಪತ್ರ ಹಿಂಪಡೆದಿರುವುದು ಬಿಜೆಪಿಗೆ ಕೊಂಚ ರಿಲೀಫ್ ಕೊಟ್ಟಿದೆ.

ಜಯನಗರ ವಾರ್ಡ್‍ನಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸುರೇಶ್ ಕಾಮತ್ ಜೆಡಿಎಸ್ ನೇತೃತ್ವದ ಸೂಚನೆಯ ಮೇರೆಗೆ ನಾಮಪತ್ರ ಹಿಂಪಡೆದಿದ್ದಾರೆ. ಬೋರುಗುಡ್ಡೆ ವಾರ್ಡ್‍ನಲ್ಲಿ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ರಹೀಂ ಫ್ಯಾನ್ಸಿ ಕಣದಲ್ಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

23 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

24 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

24 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

24 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

1 day ago