Advertisement
Political mirror

ಕೊನೆಗೂ “ಥಂಡ”ವಾಗಲಿಲ್ಲ ಬಂಡಾಯ…!, ಬಿಜೆಪಿ, ಕಾಂಗ್ರೆಸ್ ಇಲ್ಲ “ಕೂಲ್..ಕೂಲ್”

Share

ಸುಳ್ಯ: ನ.ಪಂ.ಚುನಾವಣೆಯಲ್ಲಿ ಕೆಲವು ವಾರ್ಡ್‍ಗಳಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿದ್ದು ಪಕ್ಷೇತರರಾಗಿ ಕಣದಲ್ಲಿ ಉಳಿದಿರುವುದು ಕಾಂಗ್ರೆಸ್ ಮತ್ತು ಬಿಜೆಪಿಗೆ ಬಂಡಾಯ ತಣ್ಣಗಾಗದ ಹಿನ್ನೆಲೆಯಲ್ಲಿ  ಈ ಬಾರಿ ಕೆಲ ವಾರ್ಡ್ ಗಳಲ್ಲಿ  ಎರಡೂ ಪಕ್ಷಗಳಿಗೆ ಬಿಸಿ ತಟ್ಟಲಿದೆ.

ಬೋರುಗುಡ್ಡೆಯಲ್ಲಿ ಆರ್.ಕೆ.ಮಹಮ್ಮದ್, ಬೂಡು ವಾರ್ಡ್‍ನಲ್ಲಿ ಮಹಮ್ಮದ್ ರಿಯಾಝ್ ಕಟ್ಟೆಕ್ಕಾರ್, ಬೀರಮಂಗಲ ವಾರ್ಡ್‍ನಲ್ಲಿ ಅಬ್ದುಲ್ ರಹಿಮಾನ್ ಎಂ.ಎಂ. ಜಯನಗರ ವಾರ್ಡ್‍ನಲ್ಲಿ ನವೀನ್ ಮಚಾದೋ ಪಕ್ಷೇತರರಾಗಿ ಸ್ಪರ್ಧಿಸುವುದು ಕಾಂಗ್ರೆಸ್‍ಗೆ ಸವಾಲಾಗಲಿದೆ.

ಶಾಂತಿನಗರ ವಾರ್ಡ್‍ನಲ್ಲಿ ಜನಾರ್ಧನ ಬೆಟ್ಟಂಪಾಡಿ ಮತ್ತು 19ನೇ ವಾರ್ಡ್‍ನಲ್ಲಿ ಮೋಹಿನಿ ಎ.ಪಕ್ಷೇತರರಾಗಿ ಸ್ಪರ್ಧಿಸುವುದು ಬಿಜೆಪಿಗೆ ತಲೆ ನೋವು ಸೃಷ್ಠಿಸಲಿದೆ.

ಎರಡೂ ಪಕ್ಷಗಳ ನೇತೃತ್ವ ಕಳೆದ ಕೆಲವು ದಿನಗಳಿಂದದ ನಡೆಸಿದ ಪ್ರಯತ್ನದಿಂದ ತಲಾ ಒಂದೊಂದು ವಾರ್ಡ್‍ಗಳ ಬಂಡಾಯ ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

15ನೇ ವಾರ್ಡ್‍ನಲ್ಲಿ ಪಕ್ಷೇತರನಾಗಿದ್ದ ಅಬ್ದುಲ್ ಮಜೀದ್ ನಾಮಪತ್ರ ಹಿಂಪಡೆದಿರುವುದು ಕಾಂಗ್ರೆಸ್‍ಗೆ ಮತ್ತು 20ನೇ ವಾರ್ಡ್‍ನಲ್ಲಿ ಜಯಂತಿ ಆರ್.ರೈ ನಾಮಪತ್ರ ಹಿಂಪಡೆದಿರುವುದು ಬಿಜೆಪಿಗೆ ಕೊಂಚ ರಿಲೀಫ್ ಕೊಟ್ಟಿದೆ.

ಜಯನಗರ ವಾರ್ಡ್‍ನಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸುರೇಶ್ ಕಾಮತ್ ಜೆಡಿಎಸ್ ನೇತೃತ್ವದ ಸೂಚನೆಯ ಮೇರೆಗೆ ನಾಮಪತ್ರ ಹಿಂಪಡೆದಿದ್ದಾರೆ. ಬೋರುಗುಡ್ಡೆ ವಾರ್ಡ್‍ನಲ್ಲಿ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ರಹೀಂ ಫ್ಯಾನ್ಸಿ ಕಣದಲ್ಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

6 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

6 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

14 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

19 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

19 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago