ಬಳ್ಪ: ರಸ್ತೆ ಸಮಸ್ಯೆಯಿಂದ ರೋಗಿಯೊಬ್ಬರನ್ನು ಹೊತ್ತೊಯ್ದ ಘಟನೆ ಬಳ್ಪ ಆದರ್ಶ ಗ್ರಾಮದಲ್ಲಿ ನಡೆದಿತ್ತು. ಈ ಸುದ್ದಿ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಇದೀಗ ಶಾಸಕ ಅಂಗಾರ ಅವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಕೊನೆಗೂ ರಸ್ತೆ ಭಾಗ್ಯ ಸಿಗುತ್ತಾ ಎಂಬ ನಿರೀಕ್ಷೆ ಇದೆ.
ಭಾನುವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಜೊತೆ ಮಾತುಕತೆ ನಡೆಸಿದ ಶಾಸಕ ಅಂಗಾರ ಅವರು ಶಾಶ್ವತ ರಸ್ತೆ ನಿರ್ಮಾಣ ಸಂಬಂಧ ಇಲಾಖೆಯ ಅಧಿಕಾರಿಗಳ ಜತೆ ದೂರವಾಣಿಯಲ್ಲಿ ಚರ್ಚಿಸಿ ಎರಡು ದಿನಗಳ ಒಳಗೆ ಸ್ಥಳ ತನಿಖೆ ನಡೆಸಿ ಅಂದಾಜು ಪಟ್ಟಿ ಸಲ್ಲಿಸುವಂತೆ ಸೂಚಿಸಿದರು. ಬಳಿಕ ಸ್ಥಳೀಯರ ಜತೆ ಈ ರಸ್ತೆ ಅಭಿವೃದ್ದಿಗೆ ಅನುದಾನವನ್ನು ಸರಕಾರ ಮಟ್ಟದಲ್ಲಿ ಮಂಜೂರುಗೊಳಿಸಿ ಶೀಘ್ರ ರಸ್ತೆ ಅಭಿವೃದ್ದಿ ಜತೆಗೆ ಈ ಭಾಗದಿಂದ ನೇರ ಬಳ್ಪ ಮುಖ್ಯ ಪೇಟೆಗೆ ರಸ್ತೆ ಸಂಪರ್ಕ ಜೋಡಿಸಿ ಕೊಡುವುದಾಗಿ ಭರವಸೆ ಇತ್ತರು.
ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಗ್ರಾ.ಪಂ ಅಧ್ಯಕ್ಷ ಪ್ರಕಾಶ ಮುಡ್ನೂರು ಮೊದಲಾದವರು ಉಪಸ್ಥಿತರಿದ್ದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…