ಬಳ್ಪ: ರಸ್ತೆ ಸಮಸ್ಯೆಯಿಂದ ರೋಗಿಯೊಬ್ಬರನ್ನು ಹೊತ್ತೊಯ್ದ ಘಟನೆ ಬಳ್ಪ ಆದರ್ಶ ಗ್ರಾಮದಲ್ಲಿ ನಡೆದಿತ್ತು. ಈ ಸುದ್ದಿ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಇದೀಗ ಶಾಸಕ ಅಂಗಾರ ಅವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಕೊನೆಗೂ ರಸ್ತೆ ಭಾಗ್ಯ ಸಿಗುತ್ತಾ ಎಂಬ ನಿರೀಕ್ಷೆ ಇದೆ.
ಭಾನುವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಜೊತೆ ಮಾತುಕತೆ ನಡೆಸಿದ ಶಾಸಕ ಅಂಗಾರ ಅವರು ಶಾಶ್ವತ ರಸ್ತೆ ನಿರ್ಮಾಣ ಸಂಬಂಧ ಇಲಾಖೆಯ ಅಧಿಕಾರಿಗಳ ಜತೆ ದೂರವಾಣಿಯಲ್ಲಿ ಚರ್ಚಿಸಿ ಎರಡು ದಿನಗಳ ಒಳಗೆ ಸ್ಥಳ ತನಿಖೆ ನಡೆಸಿ ಅಂದಾಜು ಪಟ್ಟಿ ಸಲ್ಲಿಸುವಂತೆ ಸೂಚಿಸಿದರು. ಬಳಿಕ ಸ್ಥಳೀಯರ ಜತೆ ಈ ರಸ್ತೆ ಅಭಿವೃದ್ದಿಗೆ ಅನುದಾನವನ್ನು ಸರಕಾರ ಮಟ್ಟದಲ್ಲಿ ಮಂಜೂರುಗೊಳಿಸಿ ಶೀಘ್ರ ರಸ್ತೆ ಅಭಿವೃದ್ದಿ ಜತೆಗೆ ಈ ಭಾಗದಿಂದ ನೇರ ಬಳ್ಪ ಮುಖ್ಯ ಪೇಟೆಗೆ ರಸ್ತೆ ಸಂಪರ್ಕ ಜೋಡಿಸಿ ಕೊಡುವುದಾಗಿ ಭರವಸೆ ಇತ್ತರು.
ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಗ್ರಾ.ಪಂ ಅಧ್ಯಕ್ಷ ಪ್ರಕಾಶ ಮುಡ್ನೂರು ಮೊದಲಾದವರು ಉಪಸ್ಥಿತರಿದ್ದರು.
ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3…
ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…