ಬಳ್ಪ: ರಸ್ತೆ ಸಮಸ್ಯೆಯಿಂದ ರೋಗಿಯೊಬ್ಬರನ್ನು ಹೊತ್ತೊಯ್ದ ಘಟನೆ ಬಳ್ಪ ಆದರ್ಶ ಗ್ರಾಮದಲ್ಲಿ ನಡೆದಿತ್ತು. ಈ ಸುದ್ದಿ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಇದೀಗ ಶಾಸಕ ಅಂಗಾರ ಅವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಕೊನೆಗೂ ರಸ್ತೆ ಭಾಗ್ಯ ಸಿಗುತ್ತಾ ಎಂಬ ನಿರೀಕ್ಷೆ ಇದೆ.
ಭಾನುವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಜೊತೆ ಮಾತುಕತೆ ನಡೆಸಿದ ಶಾಸಕ ಅಂಗಾರ ಅವರು ಶಾಶ್ವತ ರಸ್ತೆ ನಿರ್ಮಾಣ ಸಂಬಂಧ ಇಲಾಖೆಯ ಅಧಿಕಾರಿಗಳ ಜತೆ ದೂರವಾಣಿಯಲ್ಲಿ ಚರ್ಚಿಸಿ ಎರಡು ದಿನಗಳ ಒಳಗೆ ಸ್ಥಳ ತನಿಖೆ ನಡೆಸಿ ಅಂದಾಜು ಪಟ್ಟಿ ಸಲ್ಲಿಸುವಂತೆ ಸೂಚಿಸಿದರು. ಬಳಿಕ ಸ್ಥಳೀಯರ ಜತೆ ಈ ರಸ್ತೆ ಅಭಿವೃದ್ದಿಗೆ ಅನುದಾನವನ್ನು ಸರಕಾರ ಮಟ್ಟದಲ್ಲಿ ಮಂಜೂರುಗೊಳಿಸಿ ಶೀಘ್ರ ರಸ್ತೆ ಅಭಿವೃದ್ದಿ ಜತೆಗೆ ಈ ಭಾಗದಿಂದ ನೇರ ಬಳ್ಪ ಮುಖ್ಯ ಪೇಟೆಗೆ ರಸ್ತೆ ಸಂಪರ್ಕ ಜೋಡಿಸಿ ಕೊಡುವುದಾಗಿ ಭರವಸೆ ಇತ್ತರು.
ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಗ್ರಾ.ಪಂ ಅಧ್ಯಕ್ಷ ಪ್ರಕಾಶ ಮುಡ್ನೂರು ಮೊದಲಾದವರು ಉಪಸ್ಥಿತರಿದ್ದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…