ಬಳ್ಪ: ರಸ್ತೆ ಸಮಸ್ಯೆಯಿಂದ ರೋಗಿಯೊಬ್ಬರನ್ನು ಹೊತ್ತೊಯ್ದ ಘಟನೆ ಬಳ್ಪ ಆದರ್ಶ ಗ್ರಾಮದಲ್ಲಿ ನಡೆದಿತ್ತು. ಈ ಸುದ್ದಿ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಇದೀಗ ಶಾಸಕ ಅಂಗಾರ ಅವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಕೊನೆಗೂ ರಸ್ತೆ ಭಾಗ್ಯ ಸಿಗುತ್ತಾ ಎಂಬ ನಿರೀಕ್ಷೆ ಇದೆ.
ಭಾನುವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಜೊತೆ ಮಾತುಕತೆ ನಡೆಸಿದ ಶಾಸಕ ಅಂಗಾರ ಅವರು ಶಾಶ್ವತ ರಸ್ತೆ ನಿರ್ಮಾಣ ಸಂಬಂಧ ಇಲಾಖೆಯ ಅಧಿಕಾರಿಗಳ ಜತೆ ದೂರವಾಣಿಯಲ್ಲಿ ಚರ್ಚಿಸಿ ಎರಡು ದಿನಗಳ ಒಳಗೆ ಸ್ಥಳ ತನಿಖೆ ನಡೆಸಿ ಅಂದಾಜು ಪಟ್ಟಿ ಸಲ್ಲಿಸುವಂತೆ ಸೂಚಿಸಿದರು. ಬಳಿಕ ಸ್ಥಳೀಯರ ಜತೆ ಈ ರಸ್ತೆ ಅಭಿವೃದ್ದಿಗೆ ಅನುದಾನವನ್ನು ಸರಕಾರ ಮಟ್ಟದಲ್ಲಿ ಮಂಜೂರುಗೊಳಿಸಿ ಶೀಘ್ರ ರಸ್ತೆ ಅಭಿವೃದ್ದಿ ಜತೆಗೆ ಈ ಭಾಗದಿಂದ ನೇರ ಬಳ್ಪ ಮುಖ್ಯ ಪೇಟೆಗೆ ರಸ್ತೆ ಸಂಪರ್ಕ ಜೋಡಿಸಿ ಕೊಡುವುದಾಗಿ ಭರವಸೆ ಇತ್ತರು.
ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಗ್ರಾ.ಪಂ ಅಧ್ಯಕ್ಷ ಪ್ರಕಾಶ ಮುಡ್ನೂರು ಮೊದಲಾದವರು ಉಪಸ್ಥಿತರಿದ್ದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…