ಬಳ್ಪ: ರಸ್ತೆ ಸಮಸ್ಯೆಯಿಂದ ರೋಗಿಯೊಬ್ಬರನ್ನು ಹೊತ್ತೊಯ್ದ ಘಟನೆ ಬಳ್ಪ ಆದರ್ಶ ಗ್ರಾಮದಲ್ಲಿ ನಡೆದಿತ್ತು. ಈ ಸುದ್ದಿ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಇದೀಗ ಶಾಸಕ ಅಂಗಾರ ಅವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಕೊನೆಗೂ ರಸ್ತೆ ಭಾಗ್ಯ ಸಿಗುತ್ತಾ ಎಂಬ ನಿರೀಕ್ಷೆ ಇದೆ.
ಭಾನುವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಜೊತೆ ಮಾತುಕತೆ ನಡೆಸಿದ ಶಾಸಕ ಅಂಗಾರ ಅವರು ಶಾಶ್ವತ ರಸ್ತೆ ನಿರ್ಮಾಣ ಸಂಬಂಧ ಇಲಾಖೆಯ ಅಧಿಕಾರಿಗಳ ಜತೆ ದೂರವಾಣಿಯಲ್ಲಿ ಚರ್ಚಿಸಿ ಎರಡು ದಿನಗಳ ಒಳಗೆ ಸ್ಥಳ ತನಿಖೆ ನಡೆಸಿ ಅಂದಾಜು ಪಟ್ಟಿ ಸಲ್ಲಿಸುವಂತೆ ಸೂಚಿಸಿದರು. ಬಳಿಕ ಸ್ಥಳೀಯರ ಜತೆ ಈ ರಸ್ತೆ ಅಭಿವೃದ್ದಿಗೆ ಅನುದಾನವನ್ನು ಸರಕಾರ ಮಟ್ಟದಲ್ಲಿ ಮಂಜೂರುಗೊಳಿಸಿ ಶೀಘ್ರ ರಸ್ತೆ ಅಭಿವೃದ್ದಿ ಜತೆಗೆ ಈ ಭಾಗದಿಂದ ನೇರ ಬಳ್ಪ ಮುಖ್ಯ ಪೇಟೆಗೆ ರಸ್ತೆ ಸಂಪರ್ಕ ಜೋಡಿಸಿ ಕೊಡುವುದಾಗಿ ಭರವಸೆ ಇತ್ತರು.
ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಗ್ರಾ.ಪಂ ಅಧ್ಯಕ್ಷ ಪ್ರಕಾಶ ಮುಡ್ನೂರು ಮೊದಲಾದವರು ಉಪಸ್ಥಿತರಿದ್ದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…