ಬಳ್ಪ: ರಸ್ತೆ ಸಮಸ್ಯೆಯಿಂದ ರೋಗಿಯೊಬ್ಬರನ್ನು ಹೊತ್ತೊಯ್ದ ಘಟನೆ ಬಳ್ಪ ಆದರ್ಶ ಗ್ರಾಮದಲ್ಲಿ ನಡೆದಿತ್ತು. ಈ ಸುದ್ದಿ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಇದೀಗ ಶಾಸಕ ಅಂಗಾರ ಅವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಕೊನೆಗೂ ರಸ್ತೆ ಭಾಗ್ಯ ಸಿಗುತ್ತಾ ಎಂಬ ನಿರೀಕ್ಷೆ ಇದೆ.
ಭಾನುವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಜೊತೆ ಮಾತುಕತೆ ನಡೆಸಿದ ಶಾಸಕ ಅಂಗಾರ ಅವರು ಶಾಶ್ವತ ರಸ್ತೆ ನಿರ್ಮಾಣ ಸಂಬಂಧ ಇಲಾಖೆಯ ಅಧಿಕಾರಿಗಳ ಜತೆ ದೂರವಾಣಿಯಲ್ಲಿ ಚರ್ಚಿಸಿ ಎರಡು ದಿನಗಳ ಒಳಗೆ ಸ್ಥಳ ತನಿಖೆ ನಡೆಸಿ ಅಂದಾಜು ಪಟ್ಟಿ ಸಲ್ಲಿಸುವಂತೆ ಸೂಚಿಸಿದರು. ಬಳಿಕ ಸ್ಥಳೀಯರ ಜತೆ ಈ ರಸ್ತೆ ಅಭಿವೃದ್ದಿಗೆ ಅನುದಾನವನ್ನು ಸರಕಾರ ಮಟ್ಟದಲ್ಲಿ ಮಂಜೂರುಗೊಳಿಸಿ ಶೀಘ್ರ ರಸ್ತೆ ಅಭಿವೃದ್ದಿ ಜತೆಗೆ ಈ ಭಾಗದಿಂದ ನೇರ ಬಳ್ಪ ಮುಖ್ಯ ಪೇಟೆಗೆ ರಸ್ತೆ ಸಂಪರ್ಕ ಜೋಡಿಸಿ ಕೊಡುವುದಾಗಿ ಭರವಸೆ ಇತ್ತರು.
ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಗ್ರಾ.ಪಂ ಅಧ್ಯಕ್ಷ ಪ್ರಕಾಶ ಮುಡ್ನೂರು ಮೊದಲಾದವರು ಉಪಸ್ಥಿತರಿದ್ದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…