ಬಳ್ಪ: ರಸ್ತೆ ಸಮಸ್ಯೆಯಿಂದ ರೋಗಿಯೊಬ್ಬರನ್ನು ಹೊತ್ತೊಯ್ದ ಘಟನೆ ಬಳ್ಪ ಆದರ್ಶ ಗ್ರಾಮದಲ್ಲಿ ನಡೆದಿತ್ತು. ಈ ಸುದ್ದಿ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಇದೀಗ ಶಾಸಕ ಅಂಗಾರ ಅವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಕೊನೆಗೂ ರಸ್ತೆ ಭಾಗ್ಯ ಸಿಗುತ್ತಾ ಎಂಬ ನಿರೀಕ್ಷೆ ಇದೆ.
ಭಾನುವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಜೊತೆ ಮಾತುಕತೆ ನಡೆಸಿದ ಶಾಸಕ ಅಂಗಾರ ಅವರು ಶಾಶ್ವತ ರಸ್ತೆ ನಿರ್ಮಾಣ ಸಂಬಂಧ ಇಲಾಖೆಯ ಅಧಿಕಾರಿಗಳ ಜತೆ ದೂರವಾಣಿಯಲ್ಲಿ ಚರ್ಚಿಸಿ ಎರಡು ದಿನಗಳ ಒಳಗೆ ಸ್ಥಳ ತನಿಖೆ ನಡೆಸಿ ಅಂದಾಜು ಪಟ್ಟಿ ಸಲ್ಲಿಸುವಂತೆ ಸೂಚಿಸಿದರು. ಬಳಿಕ ಸ್ಥಳೀಯರ ಜತೆ ಈ ರಸ್ತೆ ಅಭಿವೃದ್ದಿಗೆ ಅನುದಾನವನ್ನು ಸರಕಾರ ಮಟ್ಟದಲ್ಲಿ ಮಂಜೂರುಗೊಳಿಸಿ ಶೀಘ್ರ ರಸ್ತೆ ಅಭಿವೃದ್ದಿ ಜತೆಗೆ ಈ ಭಾಗದಿಂದ ನೇರ ಬಳ್ಪ ಮುಖ್ಯ ಪೇಟೆಗೆ ರಸ್ತೆ ಸಂಪರ್ಕ ಜೋಡಿಸಿ ಕೊಡುವುದಾಗಿ ಭರವಸೆ ಇತ್ತರು.
ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಗ್ರಾ.ಪಂ ಅಧ್ಯಕ್ಷ ಪ್ರಕಾಶ ಮುಡ್ನೂರು ಮೊದಲಾದವರು ಉಪಸ್ಥಿತರಿದ್ದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…