ಬಳ್ಪ: ರಸ್ತೆ ಸಮಸ್ಯೆಯಿಂದ ರೋಗಿಯೊಬ್ಬರನ್ನು ಹೊತ್ತೊಯ್ದ ಘಟನೆ ಬಳ್ಪ ಆದರ್ಶ ಗ್ರಾಮದಲ್ಲಿ ನಡೆದಿತ್ತು. ಈ ಸುದ್ದಿ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಇದೀಗ ಶಾಸಕ ಅಂಗಾರ ಅವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಕೊನೆಗೂ ರಸ್ತೆ ಭಾಗ್ಯ ಸಿಗುತ್ತಾ ಎಂಬ ನಿರೀಕ್ಷೆ ಇದೆ.
ಭಾನುವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಜೊತೆ ಮಾತುಕತೆ ನಡೆಸಿದ ಶಾಸಕ ಅಂಗಾರ ಅವರು ಶಾಶ್ವತ ರಸ್ತೆ ನಿರ್ಮಾಣ ಸಂಬಂಧ ಇಲಾಖೆಯ ಅಧಿಕಾರಿಗಳ ಜತೆ ದೂರವಾಣಿಯಲ್ಲಿ ಚರ್ಚಿಸಿ ಎರಡು ದಿನಗಳ ಒಳಗೆ ಸ್ಥಳ ತನಿಖೆ ನಡೆಸಿ ಅಂದಾಜು ಪಟ್ಟಿ ಸಲ್ಲಿಸುವಂತೆ ಸೂಚಿಸಿದರು. ಬಳಿಕ ಸ್ಥಳೀಯರ ಜತೆ ಈ ರಸ್ತೆ ಅಭಿವೃದ್ದಿಗೆ ಅನುದಾನವನ್ನು ಸರಕಾರ ಮಟ್ಟದಲ್ಲಿ ಮಂಜೂರುಗೊಳಿಸಿ ಶೀಘ್ರ ರಸ್ತೆ ಅಭಿವೃದ್ದಿ ಜತೆಗೆ ಈ ಭಾಗದಿಂದ ನೇರ ಬಳ್ಪ ಮುಖ್ಯ ಪೇಟೆಗೆ ರಸ್ತೆ ಸಂಪರ್ಕ ಜೋಡಿಸಿ ಕೊಡುವುದಾಗಿ ಭರವಸೆ ಇತ್ತರು.
ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಗ್ರಾ.ಪಂ ಅಧ್ಯಕ್ಷ ಪ್ರಕಾಶ ಮುಡ್ನೂರು ಮೊದಲಾದವರು ಉಪಸ್ಥಿತರಿದ್ದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…