ಕೊನೆಯ ಓವರ್ ನಲ್ಲಿ ಮಹಮ್ಮದ್ ಶಮಿ ಹ್ಯಾಟ್ರಿಕ್: ಅಫ್ಘಾನ್ ವಿರುದ್ಧ ಭಾರತಕ್ಕೆ ರೋಚಕ ಜಯ

June 23, 2019
6:14 AM

ಸೌತಾಂಪ್ಟನ್: ಫಾಸ್ಟ್ ಬೌಲರ್ ಮಹಮ್ಮದ್ ಶಮಿ ಕೊನೆಯ ಓವರ್ ನಲ್ಲಿ ಆಕರ್ಷಕ ಹ್ಯಾಟ್ರಿಕ್ ಪಡೆಯುವ ಮೂಲಕ ಭಾರತಕ್ಕೆ 11 ರನ್ ಗಳ ರೋಚಕ ಜಯ ಗಳಿಸಿದೆ.

ಕ್ರಿಕೆಟ್ ನ ಶಿಶುಗಳು ಎಂದೇ ಹೇಳಲಾಗುತ್ತಿರುವ ಅಪ್ಘಾನಿಸ್ಥಾನದ ವಿರುದ್ದ ನಿರಾಶಾದಾಯಕ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ 225 ರನ್ ಗಳ ಗುರಿ ನೀಡಿತ್ತು. ಕೊನೆಯವರೆಗೆ ಹೋರಾಟ ನಡೆಸಿದ ಅಫಘಾನಿಸ್ಥಾನ 49.5 ಓವರ್ ಗಳಲ್ಲಿ 213 ರನ್ ಗಳಿಗೆ ಆಲೌಟಾಗಿ 11 ರನ್ ಗಳ ಸೋಲೊಪ್ಪಿಕೊಂಡಿತ್ತು.

 

 

ಅಫಘಾನ್ ತಂಡದ ಮಾಜಿ ನಾಯಕ ಮುಹಮ್ಮದ್ ನಬಿ (52 ರನ್, 55 ಎಸೆತ, 4 ಬೌಂಡರಿ, 1 ಸಿಕ್ಸರ್) ಉತ್ತಮ ಪ್ರದರ್ಶನ ನೀಡಿದರೂ ಸೋಲು ತಪ್ಪಿಸಲು ಸಾಧ್ಯವಾಗಲಿಲ್ಲ.

ಅಫ್ಘಾನ್‌ ಗೆ ಕೊನೆಯ ಓವರ್‌ನಲ್ಲಿ 16 ರನ್ ಅಗತ್ಯವಿತ್ತು. ಆದರೆ, ಅದು 4 ರನ್ ಗಳಿಸಿ 11 ರನ್‌ಗಳ ವೀರೋಚಿತ ಸೋಲುಂಡಿತು. ಕೊನೆಯ ಓವರ್ ಎಸೆದ ಮುಹಮ್ಮದ್ ಶಮಿ(4-40) ಹ್ಯಾಟ್ರಿಕ್ ವಿಕೆಟ್ ಪಡೆದು ಗಮನ ಸೆಳೆದರು.

ಅಫ್ಘಾನ್ ಪರ ರಹ್ಮತ್ ಶಾ(36), ಗುಲ್ಬದ್ದೀನ್ ನೈಬ್(27) ಹಶ್ಮತುಲ್ಲಾ ಶಾಹಿದಿ(21), ನಜೀಬುಲ್ಲಾ ಝದ್ರಾನ್(21) ಹಾಗೂ ರಶೀದ್ ಖಾನ್(14)ಎರಡಂಕೆಯ ಸ್ಕೋರ್ ಗಳಿಸಿದರು.

ಭಾರತ ಪರ ಬುಮ್ರಾ(2-39), ಚಹಾಲ್(2-36) ಹಾಗೂ ಹಾರ್ದಿಕ್ ಪಾಂಡ್ಯ(2-51) ತಲಾ ಎರಡು ವಿಕೆಟ್ ಪಡೆದರು.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 224 ರನ್ ಗಳಿಸಿತು. ಆರಂಭದಿಂದಲೂ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಜಸಪ್ರೀತ್ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ 11,000 ಕಿ.ಮೀ ಕರಾವಳಿ ಅಪಾಯದ ಅಂಚಿನಲ್ಲಿ – ಮುಂದಿನ 15 ವರ್ಷ ಕರಾವಳಿ ಕರ್ನಾಟಕಕ್ಕೆ ನಿರ್ಣಾಯಕ | ಹೊಸ ಹವಾಮಾನ ವರದಿ ಎಚ್ಚರಿಕೆ
May 31, 2026
7:16 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಕರಕುಶಲ ಗ್ರಾಮಗಳಿಗೆ ಹೊಸ ಜೀವ ತುಂಬುತ್ತಿರುವ ಪ್ರವಾಸೋದ್ಯಮ – ವಿಯೆಟ್ನಾಂ ಮಾದರಿ ಗಮನ ಸೆಳೆಯುತ್ತಿದೆ
May 31, 2026
6:46 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂ ಅಭಿವೃದ್ಧಿಗೆ ₹339 ಕೋಟಿ ಹೂಡಿಕೆ – ಕೃಷಿ, ಪ್ರವಾಸೋದ್ಯಮ, ರಸ್ತೆ ಸಂಪರ್ಕಕ್ಕೆ ಉತ್ತೇಜನ
May 31, 2026
6:40 AM
by: ದ ರೂರಲ್ ಮಿರರ್.ಕಾಂ
ದೇಶವ್ಯಾಪಿ ಗೋಹತ್ಯೆ ನಿಷೇಧ ಅಥವಾ ‘ರಾಷ್ಟ್ರೀಯ ಪ್ರಾಣಿ’ ಸ್ಥಾನಮಾನಕ್ಕೆ ಪ್ರಸ್ತಾವನೆ ಇಲ್ಲ
May 31, 2026
6:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror