ರಾಷ್ಟ್ರೀಯ

ಕೊನೆಯ ಓವರ್ ನಲ್ಲಿ ಮಹಮ್ಮದ್ ಶಮಿ ಹ್ಯಾಟ್ರಿಕ್: ಅಫ್ಘಾನ್ ವಿರುದ್ಧ ಭಾರತಕ್ಕೆ ರೋಚಕ ಜಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸೌತಾಂಪ್ಟನ್: ಫಾಸ್ಟ್ ಬೌಲರ್ ಮಹಮ್ಮದ್ ಶಮಿ ಕೊನೆಯ ಓವರ್ ನಲ್ಲಿ ಆಕರ್ಷಕ ಹ್ಯಾಟ್ರಿಕ್ ಪಡೆಯುವ ಮೂಲಕ ಭಾರತಕ್ಕೆ 11 ರನ್ ಗಳ ರೋಚಕ ಜಯ ಗಳಿಸಿದೆ.

Advertisement

ಕ್ರಿಕೆಟ್ ನ ಶಿಶುಗಳು ಎಂದೇ ಹೇಳಲಾಗುತ್ತಿರುವ ಅಪ್ಘಾನಿಸ್ಥಾನದ ವಿರುದ್ದ ನಿರಾಶಾದಾಯಕ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ 225 ರನ್ ಗಳ ಗುರಿ ನೀಡಿತ್ತು. ಕೊನೆಯವರೆಗೆ ಹೋರಾಟ ನಡೆಸಿದ ಅಫಘಾನಿಸ್ಥಾನ 49.5 ಓವರ್ ಗಳಲ್ಲಿ 213 ರನ್ ಗಳಿಗೆ ಆಲೌಟಾಗಿ 11 ರನ್ ಗಳ ಸೋಲೊಪ್ಪಿಕೊಂಡಿತ್ತು.

 

 

Advertisement

ಅಫಘಾನ್ ತಂಡದ ಮಾಜಿ ನಾಯಕ ಮುಹಮ್ಮದ್ ನಬಿ (52 ರನ್, 55 ಎಸೆತ, 4 ಬೌಂಡರಿ, 1 ಸಿಕ್ಸರ್) ಉತ್ತಮ ಪ್ರದರ್ಶನ ನೀಡಿದರೂ ಸೋಲು ತಪ್ಪಿಸಲು ಸಾಧ್ಯವಾಗಲಿಲ್ಲ.

ಅಫ್ಘಾನ್‌ ಗೆ ಕೊನೆಯ ಓವರ್‌ನಲ್ಲಿ 16 ರನ್ ಅಗತ್ಯವಿತ್ತು. ಆದರೆ, ಅದು 4 ರನ್ ಗಳಿಸಿ 11 ರನ್‌ಗಳ ವೀರೋಚಿತ ಸೋಲುಂಡಿತು. ಕೊನೆಯ ಓವರ್ ಎಸೆದ ಮುಹಮ್ಮದ್ ಶಮಿ(4-40) ಹ್ಯಾಟ್ರಿಕ್ ವಿಕೆಟ್ ಪಡೆದು ಗಮನ ಸೆಳೆದರು.

ಅಫ್ಘಾನ್ ಪರ ರಹ್ಮತ್ ಶಾ(36), ಗುಲ್ಬದ್ದೀನ್ ನೈಬ್(27) ಹಶ್ಮತುಲ್ಲಾ ಶಾಹಿದಿ(21), ನಜೀಬುಲ್ಲಾ ಝದ್ರಾನ್(21) ಹಾಗೂ ರಶೀದ್ ಖಾನ್(14)ಎರಡಂಕೆಯ ಸ್ಕೋರ್ ಗಳಿಸಿದರು.

ಭಾರತ ಪರ ಬುಮ್ರಾ(2-39), ಚಹಾಲ್(2-36) ಹಾಗೂ ಹಾರ್ದಿಕ್ ಪಾಂಡ್ಯ(2-51) ತಲಾ ಎರಡು ವಿಕೆಟ್ ಪಡೆದರು.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 224 ರನ್ ಗಳಿಸಿತು. ಆರಂಭದಿಂದಲೂ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಜಸಪ್ರೀತ್ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ

ಹಲಸು ಮೌಲ್ಯವರ್ಧನೆಯಾಗಿ ಅಡುಗೆ ಮನೆ ಸೇರುತ್ತಿದೆ. ಅದರ ಜೊತೆಗೇ ಹಲಸು ವಿವಿಧ ರೂಪದಲ್ಲಿ…

4 minutes ago

ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ

ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ…

42 minutes ago

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

5 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

8 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

11 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

14 hours ago