Advertisement
ರಾಷ್ಟ್ರೀಯ

ಕೊನೆಯ ಓವರ್ ನಲ್ಲಿ ಮಹಮ್ಮದ್ ಶಮಿ ಹ್ಯಾಟ್ರಿಕ್: ಅಫ್ಘಾನ್ ವಿರುದ್ಧ ಭಾರತಕ್ಕೆ ರೋಚಕ ಜಯ

Share

ಸೌತಾಂಪ್ಟನ್: ಫಾಸ್ಟ್ ಬೌಲರ್ ಮಹಮ್ಮದ್ ಶಮಿ ಕೊನೆಯ ಓವರ್ ನಲ್ಲಿ ಆಕರ್ಷಕ ಹ್ಯಾಟ್ರಿಕ್ ಪಡೆಯುವ ಮೂಲಕ ಭಾರತಕ್ಕೆ 11 ರನ್ ಗಳ ರೋಚಕ ಜಯ ಗಳಿಸಿದೆ.

ಕ್ರಿಕೆಟ್ ನ ಶಿಶುಗಳು ಎಂದೇ ಹೇಳಲಾಗುತ್ತಿರುವ ಅಪ್ಘಾನಿಸ್ಥಾನದ ವಿರುದ್ದ ನಿರಾಶಾದಾಯಕ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ 225 ರನ್ ಗಳ ಗುರಿ ನೀಡಿತ್ತು. ಕೊನೆಯವರೆಗೆ ಹೋರಾಟ ನಡೆಸಿದ ಅಫಘಾನಿಸ್ಥಾನ 49.5 ಓವರ್ ಗಳಲ್ಲಿ 213 ರನ್ ಗಳಿಗೆ ಆಲೌಟಾಗಿ 11 ರನ್ ಗಳ ಸೋಲೊಪ್ಪಿಕೊಂಡಿತ್ತು.

 

 

ಅಫಘಾನ್ ತಂಡದ ಮಾಜಿ ನಾಯಕ ಮುಹಮ್ಮದ್ ನಬಿ (52 ರನ್, 55 ಎಸೆತ, 4 ಬೌಂಡರಿ, 1 ಸಿಕ್ಸರ್) ಉತ್ತಮ ಪ್ರದರ್ಶನ ನೀಡಿದರೂ ಸೋಲು ತಪ್ಪಿಸಲು ಸಾಧ್ಯವಾಗಲಿಲ್ಲ.

ಅಫ್ಘಾನ್‌ ಗೆ ಕೊನೆಯ ಓವರ್‌ನಲ್ಲಿ 16 ರನ್ ಅಗತ್ಯವಿತ್ತು. ಆದರೆ, ಅದು 4 ರನ್ ಗಳಿಸಿ 11 ರನ್‌ಗಳ ವೀರೋಚಿತ ಸೋಲುಂಡಿತು. ಕೊನೆಯ ಓವರ್ ಎಸೆದ ಮುಹಮ್ಮದ್ ಶಮಿ(4-40) ಹ್ಯಾಟ್ರಿಕ್ ವಿಕೆಟ್ ಪಡೆದು ಗಮನ ಸೆಳೆದರು.

ಅಫ್ಘಾನ್ ಪರ ರಹ್ಮತ್ ಶಾ(36), ಗುಲ್ಬದ್ದೀನ್ ನೈಬ್(27) ಹಶ್ಮತುಲ್ಲಾ ಶಾಹಿದಿ(21), ನಜೀಬುಲ್ಲಾ ಝದ್ರಾನ್(21) ಹಾಗೂ ರಶೀದ್ ಖಾನ್(14)ಎರಡಂಕೆಯ ಸ್ಕೋರ್ ಗಳಿಸಿದರು.

ಭಾರತ ಪರ ಬುಮ್ರಾ(2-39), ಚಹಾಲ್(2-36) ಹಾಗೂ ಹಾರ್ದಿಕ್ ಪಾಂಡ್ಯ(2-51) ತಲಾ ಎರಡು ವಿಕೆಟ್ ಪಡೆದರು.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 224 ರನ್ ಗಳಿಸಿತು. ಆರಂಭದಿಂದಲೂ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಜಸಪ್ರೀತ್ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

2 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

10 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

17 hours ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

17 hours ago

ಕೃಷಿಯ ನಿಜವಾದ ಶಕ್ತಿ ಮಹಿಳೆಯರು : ಭಾರತದಲ್ಲಿ ಮೌನ ಕ್ರಾಂತಿ ಶುರುವಾಗಿದೆ..!

ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…

1 day ago

ಹೊಸರುಚಿ | ಮನೆಲ್ಲೇ ಸುಲಭವಾಗಿ ಮಾಡುವ “ಉಪ್ಪು ಸೊಳೆ ಬೋಳು ಬೆಂದಿ”

ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…

2 days ago