Advertisement
ರಾಷ್ಟ್ರೀಯ

ಕೊನೆಯ ಓವರ್ ನಲ್ಲಿ ಮಹಮ್ಮದ್ ಶಮಿ ಹ್ಯಾಟ್ರಿಕ್: ಅಫ್ಘಾನ್ ವಿರುದ್ಧ ಭಾರತಕ್ಕೆ ರೋಚಕ ಜಯ

Share

ಸೌತಾಂಪ್ಟನ್: ಫಾಸ್ಟ್ ಬೌಲರ್ ಮಹಮ್ಮದ್ ಶಮಿ ಕೊನೆಯ ಓವರ್ ನಲ್ಲಿ ಆಕರ್ಷಕ ಹ್ಯಾಟ್ರಿಕ್ ಪಡೆಯುವ ಮೂಲಕ ಭಾರತಕ್ಕೆ 11 ರನ್ ಗಳ ರೋಚಕ ಜಯ ಗಳಿಸಿದೆ.

ಕ್ರಿಕೆಟ್ ನ ಶಿಶುಗಳು ಎಂದೇ ಹೇಳಲಾಗುತ್ತಿರುವ ಅಪ್ಘಾನಿಸ್ಥಾನದ ವಿರುದ್ದ ನಿರಾಶಾದಾಯಕ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ 225 ರನ್ ಗಳ ಗುರಿ ನೀಡಿತ್ತು. ಕೊನೆಯವರೆಗೆ ಹೋರಾಟ ನಡೆಸಿದ ಅಫಘಾನಿಸ್ಥಾನ 49.5 ಓವರ್ ಗಳಲ್ಲಿ 213 ರನ್ ಗಳಿಗೆ ಆಲೌಟಾಗಿ 11 ರನ್ ಗಳ ಸೋಲೊಪ್ಪಿಕೊಂಡಿತ್ತು.

 

 

ಅಫಘಾನ್ ತಂಡದ ಮಾಜಿ ನಾಯಕ ಮುಹಮ್ಮದ್ ನಬಿ (52 ರನ್, 55 ಎಸೆತ, 4 ಬೌಂಡರಿ, 1 ಸಿಕ್ಸರ್) ಉತ್ತಮ ಪ್ರದರ್ಶನ ನೀಡಿದರೂ ಸೋಲು ತಪ್ಪಿಸಲು ಸಾಧ್ಯವಾಗಲಿಲ್ಲ.

ಅಫ್ಘಾನ್‌ ಗೆ ಕೊನೆಯ ಓವರ್‌ನಲ್ಲಿ 16 ರನ್ ಅಗತ್ಯವಿತ್ತು. ಆದರೆ, ಅದು 4 ರನ್ ಗಳಿಸಿ 11 ರನ್‌ಗಳ ವೀರೋಚಿತ ಸೋಲುಂಡಿತು. ಕೊನೆಯ ಓವರ್ ಎಸೆದ ಮುಹಮ್ಮದ್ ಶಮಿ(4-40) ಹ್ಯಾಟ್ರಿಕ್ ವಿಕೆಟ್ ಪಡೆದು ಗಮನ ಸೆಳೆದರು.

ಅಫ್ಘಾನ್ ಪರ ರಹ್ಮತ್ ಶಾ(36), ಗುಲ್ಬದ್ದೀನ್ ನೈಬ್(27) ಹಶ್ಮತುಲ್ಲಾ ಶಾಹಿದಿ(21), ನಜೀಬುಲ್ಲಾ ಝದ್ರಾನ್(21) ಹಾಗೂ ರಶೀದ್ ಖಾನ್(14)ಎರಡಂಕೆಯ ಸ್ಕೋರ್ ಗಳಿಸಿದರು.

ಭಾರತ ಪರ ಬುಮ್ರಾ(2-39), ಚಹಾಲ್(2-36) ಹಾಗೂ ಹಾರ್ದಿಕ್ ಪಾಂಡ್ಯ(2-51) ತಲಾ ಎರಡು ವಿಕೆಟ್ ಪಡೆದರು.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 224 ರನ್ ಗಳಿಸಿತು. ಆರಂಭದಿಂದಲೂ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಜಸಪ್ರೀತ್ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

4 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

5 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

14 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago