Advertisement
ರಾಷ್ಟ್ರೀಯ

ಕೊನೆಯ ಓವರ್ ನಲ್ಲಿ ಮಹಮ್ಮದ್ ಶಮಿ ಹ್ಯಾಟ್ರಿಕ್: ಅಫ್ಘಾನ್ ವಿರುದ್ಧ ಭಾರತಕ್ಕೆ ರೋಚಕ ಜಯ

Share

ಸೌತಾಂಪ್ಟನ್: ಫಾಸ್ಟ್ ಬೌಲರ್ ಮಹಮ್ಮದ್ ಶಮಿ ಕೊನೆಯ ಓವರ್ ನಲ್ಲಿ ಆಕರ್ಷಕ ಹ್ಯಾಟ್ರಿಕ್ ಪಡೆಯುವ ಮೂಲಕ ಭಾರತಕ್ಕೆ 11 ರನ್ ಗಳ ರೋಚಕ ಜಯ ಗಳಿಸಿದೆ.

ಕ್ರಿಕೆಟ್ ನ ಶಿಶುಗಳು ಎಂದೇ ಹೇಳಲಾಗುತ್ತಿರುವ ಅಪ್ಘಾನಿಸ್ಥಾನದ ವಿರುದ್ದ ನಿರಾಶಾದಾಯಕ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ 225 ರನ್ ಗಳ ಗುರಿ ನೀಡಿತ್ತು. ಕೊನೆಯವರೆಗೆ ಹೋರಾಟ ನಡೆಸಿದ ಅಫಘಾನಿಸ್ಥಾನ 49.5 ಓವರ್ ಗಳಲ್ಲಿ 213 ರನ್ ಗಳಿಗೆ ಆಲೌಟಾಗಿ 11 ರನ್ ಗಳ ಸೋಲೊಪ್ಪಿಕೊಂಡಿತ್ತು.

 

 

ಅಫಘಾನ್ ತಂಡದ ಮಾಜಿ ನಾಯಕ ಮುಹಮ್ಮದ್ ನಬಿ (52 ರನ್, 55 ಎಸೆತ, 4 ಬೌಂಡರಿ, 1 ಸಿಕ್ಸರ್) ಉತ್ತಮ ಪ್ರದರ್ಶನ ನೀಡಿದರೂ ಸೋಲು ತಪ್ಪಿಸಲು ಸಾಧ್ಯವಾಗಲಿಲ್ಲ.

ಅಫ್ಘಾನ್‌ ಗೆ ಕೊನೆಯ ಓವರ್‌ನಲ್ಲಿ 16 ರನ್ ಅಗತ್ಯವಿತ್ತು. ಆದರೆ, ಅದು 4 ರನ್ ಗಳಿಸಿ 11 ರನ್‌ಗಳ ವೀರೋಚಿತ ಸೋಲುಂಡಿತು. ಕೊನೆಯ ಓವರ್ ಎಸೆದ ಮುಹಮ್ಮದ್ ಶಮಿ(4-40) ಹ್ಯಾಟ್ರಿಕ್ ವಿಕೆಟ್ ಪಡೆದು ಗಮನ ಸೆಳೆದರು.

ಅಫ್ಘಾನ್ ಪರ ರಹ್ಮತ್ ಶಾ(36), ಗುಲ್ಬದ್ದೀನ್ ನೈಬ್(27) ಹಶ್ಮತುಲ್ಲಾ ಶಾಹಿದಿ(21), ನಜೀಬುಲ್ಲಾ ಝದ್ರಾನ್(21) ಹಾಗೂ ರಶೀದ್ ಖಾನ್(14)ಎರಡಂಕೆಯ ಸ್ಕೋರ್ ಗಳಿಸಿದರು.

ಭಾರತ ಪರ ಬುಮ್ರಾ(2-39), ಚಹಾಲ್(2-36) ಹಾಗೂ ಹಾರ್ದಿಕ್ ಪಾಂಡ್ಯ(2-51) ತಲಾ ಎರಡು ವಿಕೆಟ್ ಪಡೆದರು.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 224 ರನ್ ಗಳಿಸಿತು. ಆರಂಭದಿಂದಲೂ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಜಸಪ್ರೀತ್ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

6 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

7 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

8 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

17 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

19 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago