Advertisement
ಸುದ್ದಿಗಳು

ಕೊರೊನಾ‌ ಲಾಕ್ಡೌನ್ | ಮೇ.11 ರಿಂದ ಬೆಳ್ಳಾರೆಯಲ್ಲಿ ಲಾಕ್ಡೌನ್ ಕಟ್ಟುನಿಟ್ಟು | 2 ಗಂಟೆ ನಂತರ ಅಂಗಡಿಗಳು ಬಂದ್ | ಮಾಸ್ಕ್ ಇಲ್ಲದಿದ್ದರೆ ದಂಡ |

Share

ಬೆಳ್ಳಾರೆ: ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೇ 11 ರಿಂದ ಮುಂದಿನ ಆದೇಶದವರೆಗೆ ಲಾಕ್ಡೌನ್   ಕಟ್ಟುನಿಟ್ಟಾಗಿ  ಜಾರಿಯಲ್ಲಿರುತ್ತದೆ.

ಗ್ರಾಮ ಪಂಚಾಯತ್ ಹೊರಡಿಸಿರುವ ಕಟ್ಟುನಿಟ್ಟಿನ ಕ್ರಮಗಳು ಹೀಗಿವೆ…

  • ಮುಂದಿನ ಆದೇಶ ದವರೆಗೆ ಗ್ರಾ.ಪಂ ವ್ಯಾಪ್ತಿಯಲ್ಲಿ ವ್ಯಾಪಾರ ನಡೆಸಲು ಬೆಳಗ್ಗೆ6 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಅವಕಾಶವಿರುತ್ತದೆ.
  • ವ್ಯಾಪಾರದ ಸಂದರ್ಭದಲ್ಲಿ ಅಲ್ಲದೆ ಗ್ರಾ.ಪಂ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತದ್ದು,ಇಲ್ಲವಾದಲ್ಲಿ ರೂ 100 ದಂಡವನ್ನು ಕಟ್ಟಬೇಕಾಗುತ್ತದೆ
  • ಯಾವುದೇ ಸಂದರ್ಭದಲ್ಲೂ ಅಂತರ ವನ್ನು ಕಾಪಾಡಿಕೊಳ್ಳಬೇಕಾದುದು ನಮ್ಮ ಆದ್ಯ ಕರ್ತವ್ಯವಾಗಿದೆ
  • 2 ಗಂಟೆಯ ಬಳಿಕ ಯಾವುದೇ ಅಂಗಡಿ ಗಳನ್ನು ತೆರೆಯುವಂತಿಲ್ಲ. ಅಂತಹದು ಕಂಡು ಬಂದಲ್ಲಿ ಕಠಿಣ ಕಾನೂನು ಕ್ರಮಕ್ಕೆ ಒಳಗಾಗಬೇಕಾಗುತ್ತದೆ
  • ಪಂಚಾಯತ್ ವ್ಯಾಪ್ತಿಯಲ್ಲಿ ಮುಂದಿನ ಆದೇಶದವರೆಗೂ 3 ಕಡೆ ಚೆಕ್ ಪೋಸ್ಟ್ ಗಳಿರುತ್ತವೆ. ( ಜ್ಞಾನ ಗಂಗಾ ಶಾಲಾ ಬಳಿ, ಬೆಳ್ಳಾರೆ ಯ ಮಾಸ್ತಿಕಟ್ಟೆ ದ್ವಾರದ ಬಳಿ ,ಕೆ ಪಿ ಎಸ್ ಶಾಲಾ ಬಳಿ ಬೆಳ್ಳಾರೆ)
  • ಚೆಕ್ ಪೋಸ್ಟ್ ಬಳಿ ಪೋಲಿಸರು ,ಆಶಾ ಕಾರ್ಯ ಕರ್ತೆಯರು ,ಪಂಚಾಯತ್ ಸಿಬ್ಬಂದಿ /ಪಂಚಾಯತ್ ನಿಂದ ನೇಮಕ ಗೊಂಡ ಸ್ವಯಂ ಸೇವಕರು ಇರುತ್ತಾರೆ.
  • ಚೆಕ್ ಪೋಸ್ಟ್ ಬಳಿ ಮೇಲೆ ತಿಳಿಸಿದ ಅಧಿಕಾರಿಗಳು ಅಲ್ಲದೆ ಸ್ವಯಂ ಸೇವಕರೊಂದಿಗೆ ಅವರ ನಿಯಮಕ್ಕೆ ಅನುಸಾರವಾಗಿ ಸಾರ್ವಜನಿಕರು ಸಹಕರಿಸಲಿದ್ದಾರೆ.
  • ಪ್ರತಿ ಚೆಕ್ ಪೋಸ್ಟ್ ಬಳಿ ಟೆಂಪರೇಚರ್ ಟೆಸ್ಟಿಂಗ್ ಇರುತ್ತದೆ
  • ಸಾರ್ವಜನಿಕ ರು ಸಂಚರಿಸುವಾಗ ಸಂಚಾರಿ ನಿಯಮ ಕಡ್ಡಾಯವಾಗಿ ಪಾಲಿಸುವಂತದ್ದು ಅದರೊಂದಿಗೆ ಮಾಸ್ಕ್ ಕೂಡ ಕಡ್ಡಾಯ ವಾಗಿರುತ್ತದೆ. ಇಲ್ಲವಾದಲ್ಲಿ ದಂಡ ತೆರಬೇಕಾಗುತ್ತದೆ.
  • ಅನಗತ್ಯ ಓಡಾಡಕ್ಕೆ ,ಸೋಶಿಯಲ್ ಡಿಸ್ಟೆನ್ಸ್ ಮೈಂಟೈನ್ ಮಾಡಿಲ್ಲದಿದ್ದರೂ ದಂಡ ತೆರಬೇಕಾಗುತ್ತದೆ .
  • ಅಂಗಡಿ ಮಾಲಿಕರು ತಮ್ಮ ಅಂಗಡಿ ಮುಂದೆ ಗ್ರಾಹಕರನ್ನು ಸೋಶಿಯಲ್ ಡಿಸ್ಟೆನ್ಸ್ ಪಾಲಿಸುವಂತೆ ನೋಡಿಕೊಳ್ಳಬೇಕು ಇಲ್ಲವಾದಲ್ಲಿ ಮೊದಲನೆ ಬಾರಿ 100 ರೂ ದಂಡ ವಿದಿಸಲಾಗುವುದು ಮುಂದುವರಿದರೆ ಗರಿಷ್ಠ 1000 ರೂ ದಂಡ ವಿಧಿಸಲಾಗುವುದು .
  • ಅಂಗಡಿಯವರು MRP ದರಕ್ಕಿಂತ ಹೆಚ್ಚು ಮಾರಾಟ ಮಾಡುವುದು ಕಂಡುಬಂದಲ್ಲಿ ಅಥವಾ ಸಾರ್ವಜನಿಕ ವಾಗಿ ದರಪಟ್ಟಿ ಅಳವಡಿಸದಿದ್ದರೆ ಮೊದಲನೆ ಬಾರಿ 100  ರೂ ದಂಡ .ದಂಡ ಮುಂದುವರಿದರೆ ಗರಿಷ್ಠ 1000 ರೂ ದಂಡ ದಿನಕ್ಕೆ ವಿಧಿಸಲಾಗುವುದು.
  • ವ್ಯಾಪಾರ ಮಾಡುವವರನ್ನು ಬಿಟ್ಟು ಬೇರೆ ಯಾವ ವ್ಯಕ್ತಿ ಅಂಗಡಿಗಳಲ್ಲಿ ಕೂರಬಾರದು ಅದಕ್ಕೂ ದಂಡ ವಿಧಿಸಲಾಗುವುದು. ಜನರು ಸೋಶಿಯಲ್ ಡಿಸ್ಟೆನ್ಸ್ ಕಾಯ್ದುಕೊಳ್ಳದೆ ಗುಂಪಾಗಿ ನಿಂತರೆ ಅವರಿಗೆ ಕನಿಷ್ಟ 100 ರೂ ದಂಡ ಪ್ರತಿ ಸಲ ವಿಧಿಸಲಾಗುವುದು.

ಇದರ ಕುರಿತು ಯಾವುದೇ ಗೊಂದಲಗಳಿದ್ದಲ್ಲಿ ನೇರವಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಬಹುದು ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಂಜಯ ಕೆ.ಆರ್.ತಿಳಿಸಿದ್ದಾರೆ.

ಆಂಜನೇಯ ರೆಡ್ಡಿ
ಠಾಣಾಧಿಕಾರಿ ,ಬೆಳ್ಳಾರೆ ಪೋಲಿಸ್ ಠಾಣೆ
ಮೊ :- 9535556173

ಧನಂಜಯ ಕೆ ಆರ್
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬೆಳ್ಳಾರೆ ಗ್ರಾ.ಪಂ

ಮೊ : +917760381009

ಶಕುಂತಲಾ ನಾಗರಾಜ್
ಅಧ್ಯಕ್ಷೆ ,ಬೆಳ್ಳಾರೆ ಗ್ರಾ.ಪಂ
ಮೊ :- +91872247665

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 hour ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

4 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

5 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

6 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

18 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

21 hours ago