ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 52,123 ಮಂದಿಯಲ್ಲಿ ಸೊಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 15,83,792ಕ್ಕೆ ಏರಿಕೆಯಾಗಿದೆ. 775 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಈವರೆಗೆ 34,968 ಮಂದಿ ಸಾವಿಗೀಡಾಗಿದ್ದು, 10,20,582 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 5,28,242 ಸಕ್ರಿಯ ಪ್ರಕರಣಗಳು ಇವೆ.
ದೇಶದಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 3.9 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದ್ದು, 14,165 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 2.2 ಲಕ್ಷ ಮಂದಿಗೆ ಸೋಂಕು ತಗುಲಿದ್ದು, 3,659 ಮಂದಿ ಸಾವಿಗೀಡಾಗಿದ್ದಾರೆ. ದೆಹಲಿಯಲ್ಲಿ 1.3 ಲಕ್ಷ ಜನರಿಗೆ ಸೋಂಕು ದೃಢಪಟ್ಟಿದ್ದು, 3,881 ಮಂದಿ ಸಾವಿಗೀಡಾಗಿದ್ದಾರೆ. ಆಂಧ್ರಪ್ರದೇಶದಲ್ಲಿ 1.1 ಲಕ್ಷ ಜನರಿಗೆ ಸೋಂಕು ತಗುಲಿದ್ದು, 1,148 ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಬುಧವಾರ ಒಂದೇ ದಿನ 5,503 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,12,504ಕ್ಕೆ ತಲುಪಿದೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…