ಬೆಂಗಳೂರು: ದೇಶದೆಲ್ಲೆಡೆ 170 ಜಿಲ್ಲೆಗಳನ್ನು ಕೊರೋನಾ ಹಾಟ್ ಸ್ಪಾಟ್ ಎಂದು ಕೇಂದ್ರ ಸರಕಾರ ಘೋಷಿಸಿದೆ. ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕದ 8 ಜಿಲ್ಲೆಗಳು ಒಳಗೊಂಡಿದೆ.
ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿರುವ ಆಧಾರದಲ್ಲಿ ಕೇಂದ್ರ ಸರಕಾರ 3 ವಿಭಾಗ ಮಾಡಿದೆ. ಅದರಲ್ಲಿ ಹಾಟ್ ಸ್ಪಾಟ್, ನಾನ್ ಹಾಟ್ ಸ್ಪಾಟ್ ಮತ್ತು ಗ್ರೀನ್ ಎಂದು ವಿಭಜಿಸಿದೆ. ಇದರಂತೆ ದೇಶದ ಒಟ್ಟು 170 ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಅದರಂತೆ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ , ಬೀದರ್, ಕಲಬುರ್ಗಿ, , ಬಾಗಲಕೋಟೆ, ಧಾರವಾಡ ಜಿಲ್ಲೆಗಳೂ ಕೊರೊನಾ ಹಾಟ್ ಸ್ಪಾಟ್ ಜಿಲ್ಲೆಗಳಾಗಿವೆ. ಈ ಜಿಲ್ಲೆಗಳಲ್ಲಿ ನಿಗಾ ಹೆಚ್ಚಾಗಿರುತ್ತದೆ. ಇದುವರೆಗೆ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗದ ಜಿಲ್ಲೆಗಳಲ್ಲಿ ಎ. 20ರ ನಂತರ ಲಾಕ್ಡೌನ್ ಸಡಿಲಗೊಳಿಸಲಾಗುವುದು ಎಂಬ ಮಾಹಿತಿ ಯನ್ನು ಆರೋಗ್ಯ ಇಲಾಖೆ ನೀಡಿದೆ.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…