ಬೆಂಗಳೂರು: ದೇಶದೆಲ್ಲೆಡೆ 170 ಜಿಲ್ಲೆಗಳನ್ನು ಕೊರೋನಾ ಹಾಟ್ ಸ್ಪಾಟ್ ಎಂದು ಕೇಂದ್ರ ಸರಕಾರ ಘೋಷಿಸಿದೆ. ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕದ 8 ಜಿಲ್ಲೆಗಳು ಒಳಗೊಂಡಿದೆ.
ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿರುವ ಆಧಾರದಲ್ಲಿ ಕೇಂದ್ರ ಸರಕಾರ 3 ವಿಭಾಗ ಮಾಡಿದೆ. ಅದರಲ್ಲಿ ಹಾಟ್ ಸ್ಪಾಟ್, ನಾನ್ ಹಾಟ್ ಸ್ಪಾಟ್ ಮತ್ತು ಗ್ರೀನ್ ಎಂದು ವಿಭಜಿಸಿದೆ. ಇದರಂತೆ ದೇಶದ ಒಟ್ಟು 170 ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಅದರಂತೆ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ , ಬೀದರ್, ಕಲಬುರ್ಗಿ, , ಬಾಗಲಕೋಟೆ, ಧಾರವಾಡ ಜಿಲ್ಲೆಗಳೂ ಕೊರೊನಾ ಹಾಟ್ ಸ್ಪಾಟ್ ಜಿಲ್ಲೆಗಳಾಗಿವೆ. ಈ ಜಿಲ್ಲೆಗಳಲ್ಲಿ ನಿಗಾ ಹೆಚ್ಚಾಗಿರುತ್ತದೆ. ಇದುವರೆಗೆ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗದ ಜಿಲ್ಲೆಗಳಲ್ಲಿ ಎ. 20ರ ನಂತರ ಲಾಕ್ಡೌನ್ ಸಡಿಲಗೊಳಿಸಲಾಗುವುದು ಎಂಬ ಮಾಹಿತಿ ಯನ್ನು ಆರೋಗ್ಯ ಇಲಾಖೆ ನೀಡಿದೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…