ಮಂಗಳೂರು: ಕೊರೊನಾ ವೈರಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಝೋನ್ ಹಾಗೂ ಉಡುಪಿ ಜಿಲ್ಲೆಯನ್ನು ಗ್ರೀನ್ ಝೋನ್ ಆಗಿ ಆರೋಗ್ಯ ಇಲಾಖೆ ಘೋಷಣೆ ಮಾಡಿದೆ. ಈ ಹಿಂದೆ ರೆಡ್ ಝೋನ್ ನಲ್ಲಿದ್ದ ದ.ಕ. ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ಈಗ ಆರೆಂಜ್ ಝೋನ್ ಘೋಷಿಸಲಾಗಿದೆ.
ಆರೆಂಜ್ ಝೋನ್ ತೀರಾ ಅಪಾಯ ಅಲ್ಲದ ವಲಯವಾಗಿದೆ, ಹಸಿರು ವಲಯವು ಯಾವುದೇ ಅಪಾಯವಿಲ್ಲದೆ ಸೇಫ್ ಆಗಿರುತ್ತದೆ. ಈ ಝೋನ್ ಘೋಷಣೆಗೂ ಮುನ್ನ ತಾಲೂಕುವಾರು ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ತಾಲೂಕುವಾರು ಕೊರೊನಾ ಪಾಸಿಟಿವ್ ಪ್ರಕರಣ ಗಮನಿಸಿ ಹಸಿರುವಲಯವನ್ನಾಗಿ ಮಾಡಲಾಗುತ್ತದೆ. ಇನ್ನು ಕೊರೊನಾ ಪಾಸಿಟಿವ್ ಕಂಡುಬಂದ ಪ್ರದೇಶವನ್ನು ಸೀಲ್ ಮಾಡಲಾಗುತ್ತದೆ.
ರಾಜ್ಯದಲ್ಲಿ ಮೈಸೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೆಂಗಳೂರು ನಗರ ರೆಡ್ ಝೋನ್ ನಲ್ಲಿದೆ.
ಬೀದರ್, ಧಾರಾವಾಡ, ಬಳ್ಳಾರಿ, ದಕ್ಷಿಣ ಕನ್ನಡ, ಮಂಡ್ಯ ಆರೆಂಜ್ ಝೋನ್ ನಲ್ಲಿದೆ.
14 ಜಿಲ್ಲೆಗಳು ಗ್ರೀನ್ ಝೋನ್ ನಲ್ಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಯಾದಗಿರಿ, ಕೊಪ್ಪಳ, ಹಾವೇರಿ, ರಾಯಚೂರು, ಹಾಸನ, ಚಾಮರಾಜನಗರ, ಕೋಲಾರ, ಉಡುಪಿ, ಕೊಡಗು, ದಾವಣಗೆರೆ, ಚಿತ್ರದುರ್ಗ ಗ್ರೀನ್ ಝೋನ್ ನಲ್ಲಿದೆ
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…