ಮಂಗಳೂರು: ಕೊರೊನಾ ವೈರಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಝೋನ್ ಹಾಗೂ ಉಡುಪಿ ಜಿಲ್ಲೆಯನ್ನು ಗ್ರೀನ್ ಝೋನ್ ಆಗಿ ಆರೋಗ್ಯ ಇಲಾಖೆ ಘೋಷಣೆ ಮಾಡಿದೆ. ಈ ಹಿಂದೆ ರೆಡ್ ಝೋನ್ ನಲ್ಲಿದ್ದ ದ.ಕ. ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ಈಗ ಆರೆಂಜ್ ಝೋನ್ ಘೋಷಿಸಲಾಗಿದೆ.
ಆರೆಂಜ್ ಝೋನ್ ತೀರಾ ಅಪಾಯ ಅಲ್ಲದ ವಲಯವಾಗಿದೆ, ಹಸಿರು ವಲಯವು ಯಾವುದೇ ಅಪಾಯವಿಲ್ಲದೆ ಸೇಫ್ ಆಗಿರುತ್ತದೆ. ಈ ಝೋನ್ ಘೋಷಣೆಗೂ ಮುನ್ನ ತಾಲೂಕುವಾರು ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ತಾಲೂಕುವಾರು ಕೊರೊನಾ ಪಾಸಿಟಿವ್ ಪ್ರಕರಣ ಗಮನಿಸಿ ಹಸಿರುವಲಯವನ್ನಾಗಿ ಮಾಡಲಾಗುತ್ತದೆ. ಇನ್ನು ಕೊರೊನಾ ಪಾಸಿಟಿವ್ ಕಂಡುಬಂದ ಪ್ರದೇಶವನ್ನು ಸೀಲ್ ಮಾಡಲಾಗುತ್ತದೆ.
ರಾಜ್ಯದಲ್ಲಿ ಮೈಸೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೆಂಗಳೂರು ನಗರ ರೆಡ್ ಝೋನ್ ನಲ್ಲಿದೆ.
ಬೀದರ್, ಧಾರಾವಾಡ, ಬಳ್ಳಾರಿ, ದಕ್ಷಿಣ ಕನ್ನಡ, ಮಂಡ್ಯ ಆರೆಂಜ್ ಝೋನ್ ನಲ್ಲಿದೆ.
14 ಜಿಲ್ಲೆಗಳು ಗ್ರೀನ್ ಝೋನ್ ನಲ್ಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಯಾದಗಿರಿ, ಕೊಪ್ಪಳ, ಹಾವೇರಿ, ರಾಯಚೂರು, ಹಾಸನ, ಚಾಮರಾಜನಗರ, ಕೋಲಾರ, ಉಡುಪಿ, ಕೊಡಗು, ದಾವಣಗೆರೆ, ಚಿತ್ರದುರ್ಗ ಗ್ರೀನ್ ಝೋನ್ ನಲ್ಲಿದೆ
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…