ಮಂಗಳೂರು: ಕೊರೊನಾ ವೈರಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಝೋನ್ ಹಾಗೂ ಉಡುಪಿ ಜಿಲ್ಲೆಯನ್ನು ಗ್ರೀನ್ ಝೋನ್ ಆಗಿ ಆರೋಗ್ಯ ಇಲಾಖೆ ಘೋಷಣೆ ಮಾಡಿದೆ. ಈ ಹಿಂದೆ ರೆಡ್ ಝೋನ್ ನಲ್ಲಿದ್ದ ದ.ಕ. ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ಈಗ ಆರೆಂಜ್ ಝೋನ್ ಘೋಷಿಸಲಾಗಿದೆ.
ಆರೆಂಜ್ ಝೋನ್ ತೀರಾ ಅಪಾಯ ಅಲ್ಲದ ವಲಯವಾಗಿದೆ, ಹಸಿರು ವಲಯವು ಯಾವುದೇ ಅಪಾಯವಿಲ್ಲದೆ ಸೇಫ್ ಆಗಿರುತ್ತದೆ. ಈ ಝೋನ್ ಘೋಷಣೆಗೂ ಮುನ್ನ ತಾಲೂಕುವಾರು ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ತಾಲೂಕುವಾರು ಕೊರೊನಾ ಪಾಸಿಟಿವ್ ಪ್ರಕರಣ ಗಮನಿಸಿ ಹಸಿರುವಲಯವನ್ನಾಗಿ ಮಾಡಲಾಗುತ್ತದೆ. ಇನ್ನು ಕೊರೊನಾ ಪಾಸಿಟಿವ್ ಕಂಡುಬಂದ ಪ್ರದೇಶವನ್ನು ಸೀಲ್ ಮಾಡಲಾಗುತ್ತದೆ.
ರಾಜ್ಯದಲ್ಲಿ ಮೈಸೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೆಂಗಳೂರು ನಗರ ರೆಡ್ ಝೋನ್ ನಲ್ಲಿದೆ.
ಬೀದರ್, ಧಾರಾವಾಡ, ಬಳ್ಳಾರಿ, ದಕ್ಷಿಣ ಕನ್ನಡ, ಮಂಡ್ಯ ಆರೆಂಜ್ ಝೋನ್ ನಲ್ಲಿದೆ.
14 ಜಿಲ್ಲೆಗಳು ಗ್ರೀನ್ ಝೋನ್ ನಲ್ಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಯಾದಗಿರಿ, ಕೊಪ್ಪಳ, ಹಾವೇರಿ, ರಾಯಚೂರು, ಹಾಸನ, ಚಾಮರಾಜನಗರ, ಕೋಲಾರ, ಉಡುಪಿ, ಕೊಡಗು, ದಾವಣಗೆರೆ, ಚಿತ್ರದುರ್ಗ ಗ್ರೀನ್ ಝೋನ್ ನಲ್ಲಿದೆ
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…