ಮಂಗಳೂರು: ಕೊರೊನಾ ವೈರಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಝೋನ್ ಹಾಗೂ ಉಡುಪಿ ಜಿಲ್ಲೆಯನ್ನು ಗ್ರೀನ್ ಝೋನ್ ಆಗಿ ಆರೋಗ್ಯ ಇಲಾಖೆ ಘೋಷಣೆ ಮಾಡಿದೆ. ಈ ಹಿಂದೆ ರೆಡ್ ಝೋನ್ ನಲ್ಲಿದ್ದ ದ.ಕ. ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ಈಗ ಆರೆಂಜ್ ಝೋನ್ ಘೋಷಿಸಲಾಗಿದೆ.
ಆರೆಂಜ್ ಝೋನ್ ತೀರಾ ಅಪಾಯ ಅಲ್ಲದ ವಲಯವಾಗಿದೆ, ಹಸಿರು ವಲಯವು ಯಾವುದೇ ಅಪಾಯವಿಲ್ಲದೆ ಸೇಫ್ ಆಗಿರುತ್ತದೆ. ಈ ಝೋನ್ ಘೋಷಣೆಗೂ ಮುನ್ನ ತಾಲೂಕುವಾರು ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ತಾಲೂಕುವಾರು ಕೊರೊನಾ ಪಾಸಿಟಿವ್ ಪ್ರಕರಣ ಗಮನಿಸಿ ಹಸಿರುವಲಯವನ್ನಾಗಿ ಮಾಡಲಾಗುತ್ತದೆ. ಇನ್ನು ಕೊರೊನಾ ಪಾಸಿಟಿವ್ ಕಂಡುಬಂದ ಪ್ರದೇಶವನ್ನು ಸೀಲ್ ಮಾಡಲಾಗುತ್ತದೆ.
ರಾಜ್ಯದಲ್ಲಿ ಮೈಸೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೆಂಗಳೂರು ನಗರ ರೆಡ್ ಝೋನ್ ನಲ್ಲಿದೆ.
ಬೀದರ್, ಧಾರಾವಾಡ, ಬಳ್ಳಾರಿ, ದಕ್ಷಿಣ ಕನ್ನಡ, ಮಂಡ್ಯ ಆರೆಂಜ್ ಝೋನ್ ನಲ್ಲಿದೆ.
14 ಜಿಲ್ಲೆಗಳು ಗ್ರೀನ್ ಝೋನ್ ನಲ್ಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಯಾದಗಿರಿ, ಕೊಪ್ಪಳ, ಹಾವೇರಿ, ರಾಯಚೂರು, ಹಾಸನ, ಚಾಮರಾಜನಗರ, ಕೋಲಾರ, ಉಡುಪಿ, ಕೊಡಗು, ದಾವಣಗೆರೆ, ಚಿತ್ರದುರ್ಗ ಗ್ರೀನ್ ಝೋನ್ ನಲ್ಲಿದೆ
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…