ಕೊರೊನಾ ವೈರಸ್ ಪಾಸಿಟಿವ್ ಆಗಿದ್ದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖವಾಗಿ, ಶನಿವಾರ ಆಸ್ಪತ್ರೆ ಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದೆ. ಮಗುವಿನ ತಾಯಿ ಹಾಗೂ ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಆಗಿರುತ್ತದೆ. ಇವರೂ ಕೂಡಾ ಡಿಸ್ಚಾಜ್೯ ಆಗಿರುತ್ತಾರೆ. ಇದುವರೆಗೆ ದ.ಕ. ಜಿಲ್ಲೆಯ 12 ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ 6 ಮಂದಿ ಗುಣಮುಖರಾಗಿ, ಬಿಡುಗಡೆಗೊಂಡಿದ್ದಾರೆ.
ಎ.5 ರಿಂದ 11 ರವರೆಗೆ ದ.ಕ. ಜಿಲ್ಲೆಯಲ್ಲಿ ಯಾವುದೇ ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಮಾಹಿತಿ ನೀಡಿದ್ದಾರೆ. ಶನಿವಾರ ಕೂಡಾ 52 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು ಇದುವರೆಗೆ ಒಟ್ಟು 38865 ಮಂದಿಯನ್ನು ತಪಾಸಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…