ಕೊರೊನಾ ವೈರಸ್ ಪಾಸಿಟಿವ್ ಆಗಿದ್ದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖವಾಗಿ, ಶನಿವಾರ ಆಸ್ಪತ್ರೆ ಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದೆ. ಮಗುವಿನ ತಾಯಿ ಹಾಗೂ ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಆಗಿರುತ್ತದೆ. ಇವರೂ ಕೂಡಾ ಡಿಸ್ಚಾಜ್೯ ಆಗಿರುತ್ತಾರೆ. ಇದುವರೆಗೆ ದ.ಕ. ಜಿಲ್ಲೆಯ 12 ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ 6 ಮಂದಿ ಗುಣಮುಖರಾಗಿ, ಬಿಡುಗಡೆಗೊಂಡಿದ್ದಾರೆ.
ಎ.5 ರಿಂದ 11 ರವರೆಗೆ ದ.ಕ. ಜಿಲ್ಲೆಯಲ್ಲಿ ಯಾವುದೇ ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಮಾಹಿತಿ ನೀಡಿದ್ದಾರೆ. ಶನಿವಾರ ಕೂಡಾ 52 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು ಇದುವರೆಗೆ ಒಟ್ಟು 38865 ಮಂದಿಯನ್ನು ತಪಾಸಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…