ಕೊರೊನಾ ವೈರಸ್ ಪಾಸಿಟಿವ್ ಆಗಿದ್ದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖವಾಗಿ, ಶನಿವಾರ ಆಸ್ಪತ್ರೆ ಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದೆ. ಮಗುವಿನ ತಾಯಿ ಹಾಗೂ ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಆಗಿರುತ್ತದೆ. ಇವರೂ ಕೂಡಾ ಡಿಸ್ಚಾಜ್೯ ಆಗಿರುತ್ತಾರೆ. ಇದುವರೆಗೆ ದ.ಕ. ಜಿಲ್ಲೆಯ 12 ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ 6 ಮಂದಿ ಗುಣಮುಖರಾಗಿ, ಬಿಡುಗಡೆಗೊಂಡಿದ್ದಾರೆ.
ಎ.5 ರಿಂದ 11 ರವರೆಗೆ ದ.ಕ. ಜಿಲ್ಲೆಯಲ್ಲಿ ಯಾವುದೇ ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಮಾಹಿತಿ ನೀಡಿದ್ದಾರೆ. ಶನಿವಾರ ಕೂಡಾ 52 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು ಇದುವರೆಗೆ ಒಟ್ಟು 38865 ಮಂದಿಯನ್ನು ತಪಾಸಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…