ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣದಲ್ಲಿ ಕೊಂಚ ನೆಮ್ಮದಿ ತಂದಿದೆ. ಕಳೆದ 12 ಗಂಟೆಯಲ್ಲಿ 10 ಪ್ರಕರಣ ಮಾತ್ರವೇ ಪಾಸಿಟಿವ್ ಬಂದಿದೆ. ಎರಡು ದಿನಕ್ಕೆ ಹೋಲಿಸಿದರೆ ಸೋಮವಾರ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣ ಕಂಡುಬಂದಿದೆ.
ಸೋಮವಾರ ಬೆಳಗಿನವರೆಗೆ ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 422 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಂಜೆಯ ವೇಳೆ ಮತ್ತೆ 4 ಪಾಸಿಟಿವ್ ಪ್ರಕರಣ ಪತ್ತೆಯಾಗುವ ಮೂಲಕ ರಾಜ್ಯದಲ್ಲಿ ಒಟ್ಟು 14 ಪಾಸಿಟಿವ್ ಪ್ರಕರಣ ಕಂಡುಬಂದಿದೆ.
ದೇಶದಲ್ಲಿ ಮಾತ್ರಾ ಒಂದೇ ದಿನ 4,213 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. 67152 ಪೈಕಿ 20,917 ಮಂದಿ ಗುಣಮುಖರಾಗಿದ್ದಾರೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…