ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣದಲ್ಲಿ ಕೊಂಚ ನೆಮ್ಮದಿ ತಂದಿದೆ. ಕಳೆದ 12 ಗಂಟೆಯಲ್ಲಿ 10 ಪ್ರಕರಣ ಮಾತ್ರವೇ ಪಾಸಿಟಿವ್ ಬಂದಿದೆ. ಎರಡು ದಿನಕ್ಕೆ ಹೋಲಿಸಿದರೆ ಸೋಮವಾರ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣ ಕಂಡುಬಂದಿದೆ.
ಸೋಮವಾರ ಬೆಳಗಿನವರೆಗೆ ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 422 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಂಜೆಯ ವೇಳೆ ಮತ್ತೆ 4 ಪಾಸಿಟಿವ್ ಪ್ರಕರಣ ಪತ್ತೆಯಾಗುವ ಮೂಲಕ ರಾಜ್ಯದಲ್ಲಿ ಒಟ್ಟು 14 ಪಾಸಿಟಿವ್ ಪ್ರಕರಣ ಕಂಡುಬಂದಿದೆ.
ದೇಶದಲ್ಲಿ ಮಾತ್ರಾ ಒಂದೇ ದಿನ 4,213 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. 67152 ಪೈಕಿ 20,917 ಮಂದಿ ಗುಣಮುಖರಾಗಿದ್ದಾರೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…