ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣದಲ್ಲಿ ಕೊಂಚ ನೆಮ್ಮದಿ ತಂದಿದೆ. ಕಳೆದ 12 ಗಂಟೆಯಲ್ಲಿ 10 ಪ್ರಕರಣ ಮಾತ್ರವೇ ಪಾಸಿಟಿವ್ ಬಂದಿದೆ. ಎರಡು ದಿನಕ್ಕೆ ಹೋಲಿಸಿದರೆ ಸೋಮವಾರ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣ ಕಂಡುಬಂದಿದೆ.
ಸೋಮವಾರ ಬೆಳಗಿನವರೆಗೆ ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 422 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಂಜೆಯ ವೇಳೆ ಮತ್ತೆ 4 ಪಾಸಿಟಿವ್ ಪ್ರಕರಣ ಪತ್ತೆಯಾಗುವ ಮೂಲಕ ರಾಜ್ಯದಲ್ಲಿ ಒಟ್ಟು 14 ಪಾಸಿಟಿವ್ ಪ್ರಕರಣ ಕಂಡುಬಂದಿದೆ.
ದೇಶದಲ್ಲಿ ಮಾತ್ರಾ ಒಂದೇ ದಿನ 4,213 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. 67152 ಪೈಕಿ 20,917 ಮಂದಿ ಗುಣಮುಖರಾಗಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…