ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣದಲ್ಲಿ ಕೊಂಚ ನೆಮ್ಮದಿ ತಂದಿದೆ. ಕಳೆದ 12 ಗಂಟೆಯಲ್ಲಿ 10 ಪ್ರಕರಣ ಮಾತ್ರವೇ ಪಾಸಿಟಿವ್ ಬಂದಿದೆ. ಎರಡು ದಿನಕ್ಕೆ ಹೋಲಿಸಿದರೆ ಸೋಮವಾರ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣ ಕಂಡುಬಂದಿದೆ.
ಸೋಮವಾರ ಬೆಳಗಿನವರೆಗೆ ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 422 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಂಜೆಯ ವೇಳೆ ಮತ್ತೆ 4 ಪಾಸಿಟಿವ್ ಪ್ರಕರಣ ಪತ್ತೆಯಾಗುವ ಮೂಲಕ ರಾಜ್ಯದಲ್ಲಿ ಒಟ್ಟು 14 ಪಾಸಿಟಿವ್ ಪ್ರಕರಣ ಕಂಡುಬಂದಿದೆ.
ದೇಶದಲ್ಲಿ ಮಾತ್ರಾ ಒಂದೇ ದಿನ 4,213 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. 67152 ಪೈಕಿ 20,917 ಮಂದಿ ಗುಣಮುಖರಾಗಿದ್ದಾರೆ.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…