ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣದಲ್ಲಿ ಕೊಂಚ ನೆಮ್ಮದಿ ತಂದಿದೆ. ಕಳೆದ 12 ಗಂಟೆಯಲ್ಲಿ 10 ಪ್ರಕರಣ ಮಾತ್ರವೇ ಪಾಸಿಟಿವ್ ಬಂದಿದೆ. ಎರಡು ದಿನಕ್ಕೆ ಹೋಲಿಸಿದರೆ ಸೋಮವಾರ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣ ಕಂಡುಬಂದಿದೆ.
ಸೋಮವಾರ ಬೆಳಗಿನವರೆಗೆ ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 422 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಂಜೆಯ ವೇಳೆ ಮತ್ತೆ 4 ಪಾಸಿಟಿವ್ ಪ್ರಕರಣ ಪತ್ತೆಯಾಗುವ ಮೂಲಕ ರಾಜ್ಯದಲ್ಲಿ ಒಟ್ಟು 14 ಪಾಸಿಟಿವ್ ಪ್ರಕರಣ ಕಂಡುಬಂದಿದೆ.
ದೇಶದಲ್ಲಿ ಮಾತ್ರಾ ಒಂದೇ ದಿನ 4,213 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. 67152 ಪೈಕಿ 20,917 ಮಂದಿ ಗುಣಮುಖರಾಗಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…