ನವದೆಹಲಿ: ಕೊರೋನಾ ವೈರಸ್ ಹರಡುವುದು ತಡೆಗೆ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಇದೀಗ ಜನರಿಗೆ ತೊಂದರೆಯಾಗದಂತೆ ದೇಶದ ನಾಗರಿಕರಿಗೆ ಕೇಂದ್ರ ಸರ್ಕಾರ 1.7 ಲಕ್ಷ ಕೋಟಿ ರೂ ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ಅನ್ನು ನಿಯಂತ್ರಿಸುವ ಮತ್ತು ಸೋಂಕು ಬಾದಿತ ಜನರಿಗೆ ಪರಿಹಾರ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಇಂದು 1.7 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದರು.
ಇದರಲ್ಲಿ ಪ್ರಮುಖವಾಗಿ ವೈದ್ಯಕೀಯ ಸಿಬಂದಿಗಳಿಗೆ, ಕೆಲಸ ಮಾಡುವ ಮಂದಿಗೆ 50 ಲಕ್ಷ ವಿಮೆ , ಬಡವರಿಗೆ ಮುಂದಿನ 3 ತಿಂಗಳಿಗೆ ಅಕ್ಕಿ ಹಾಗೂ ಗೋಧಿ ಉಚಿತವಾಗಿ ವಿತರಣೆ, ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಮೊದಲ ಕಂತು ತಕ್ಷಣ ಬಿಡುಗಡೆ , 2000 ರೂಪಾಯಿ ಉದ್ಯೋಗ ಖಾತ್ರಿ ಕಾರ್ಮಿಕರಿಗೆ ತಕ್ಷಣ ನೀಡುವುದು, ವೃದ್ಧರಿಗೆ 1000 ಸಹಾಯ ಧನ ಪಿಂಚಣಿ ಹೆಚ್ಚುವರಿ ಹಾಗೂ 8.3 ಕೋಟಿ ಮಂದಿಗೆ ಉಜ್ವಲ ಗ್ಯಾಸ್ ಯೋಜನೆ ಉಚಿತವಾಗಿ ಗ್ಯಾಸ್ ವಿತರಣೆ ಸೇರಿದೆ.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…