ನವದೆಹಲಿ: ಕೊರೋನಾ ವೈರಸ್ ಹರಡುವುದು ತಡೆಗೆ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಇದೀಗ ಜನರಿಗೆ ತೊಂದರೆಯಾಗದಂತೆ ದೇಶದ ನಾಗರಿಕರಿಗೆ ಕೇಂದ್ರ ಸರ್ಕಾರ 1.7 ಲಕ್ಷ ಕೋಟಿ ರೂ ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ಅನ್ನು ನಿಯಂತ್ರಿಸುವ ಮತ್ತು ಸೋಂಕು ಬಾದಿತ ಜನರಿಗೆ ಪರಿಹಾರ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಇಂದು 1.7 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದರು.
ಇದರಲ್ಲಿ ಪ್ರಮುಖವಾಗಿ ವೈದ್ಯಕೀಯ ಸಿಬಂದಿಗಳಿಗೆ, ಕೆಲಸ ಮಾಡುವ ಮಂದಿಗೆ 50 ಲಕ್ಷ ವಿಮೆ , ಬಡವರಿಗೆ ಮುಂದಿನ 3 ತಿಂಗಳಿಗೆ ಅಕ್ಕಿ ಹಾಗೂ ಗೋಧಿ ಉಚಿತವಾಗಿ ವಿತರಣೆ, ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಮೊದಲ ಕಂತು ತಕ್ಷಣ ಬಿಡುಗಡೆ , 2000 ರೂಪಾಯಿ ಉದ್ಯೋಗ ಖಾತ್ರಿ ಕಾರ್ಮಿಕರಿಗೆ ತಕ್ಷಣ ನೀಡುವುದು, ವೃದ್ಧರಿಗೆ 1000 ಸಹಾಯ ಧನ ಪಿಂಚಣಿ ಹೆಚ್ಚುವರಿ ಹಾಗೂ 8.3 ಕೋಟಿ ಮಂದಿಗೆ ಉಜ್ವಲ ಗ್ಯಾಸ್ ಯೋಜನೆ ಉಚಿತವಾಗಿ ಗ್ಯಾಸ್ ವಿತರಣೆ ಸೇರಿದೆ.
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…
ಉತ್ತರ ಪೆಸಿಫಿಕ್ ಸಾಗರದಲ್ಲಿ ಬದಲಾಗುತ್ತಿರುವ ಹವಾಮಾನ - ಪ್ರಭಲ ಭೂಕಂಪ ಹಾಗೂ ಸುನಾಮಿ…
ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…