ನವದೆಹಲಿ: ಕೊರೋನಾ ವೈರಸ್ ಹರಡುವುದು ತಡೆಗೆ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಇದೀಗ ಜನರಿಗೆ ತೊಂದರೆಯಾಗದಂತೆ ದೇಶದ ನಾಗರಿಕರಿಗೆ ಕೇಂದ್ರ ಸರ್ಕಾರ 1.7 ಲಕ್ಷ ಕೋಟಿ ರೂ ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ಅನ್ನು ನಿಯಂತ್ರಿಸುವ ಮತ್ತು ಸೋಂಕು ಬಾದಿತ ಜನರಿಗೆ ಪರಿಹಾರ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಇಂದು 1.7 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದರು.
ಇದರಲ್ಲಿ ಪ್ರಮುಖವಾಗಿ ವೈದ್ಯಕೀಯ ಸಿಬಂದಿಗಳಿಗೆ, ಕೆಲಸ ಮಾಡುವ ಮಂದಿಗೆ 50 ಲಕ್ಷ ವಿಮೆ , ಬಡವರಿಗೆ ಮುಂದಿನ 3 ತಿಂಗಳಿಗೆ ಅಕ್ಕಿ ಹಾಗೂ ಗೋಧಿ ಉಚಿತವಾಗಿ ವಿತರಣೆ, ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಮೊದಲ ಕಂತು ತಕ್ಷಣ ಬಿಡುಗಡೆ , 2000 ರೂಪಾಯಿ ಉದ್ಯೋಗ ಖಾತ್ರಿ ಕಾರ್ಮಿಕರಿಗೆ ತಕ್ಷಣ ನೀಡುವುದು, ವೃದ್ಧರಿಗೆ 1000 ಸಹಾಯ ಧನ ಪಿಂಚಣಿ ಹೆಚ್ಚುವರಿ ಹಾಗೂ 8.3 ಕೋಟಿ ಮಂದಿಗೆ ಉಜ್ವಲ ಗ್ಯಾಸ್ ಯೋಜನೆ ಉಚಿತವಾಗಿ ಗ್ಯಾಸ್ ವಿತರಣೆ ಸೇರಿದೆ.
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ…
ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…