ನವದೆಹಲಿ: ಕೊರೋನಾ ವೈರಸ್ ಹರಡುವುದು ತಡೆಗೆ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಇದೀಗ ಜನರಿಗೆ ತೊಂದರೆಯಾಗದಂತೆ ದೇಶದ ನಾಗರಿಕರಿಗೆ ಕೇಂದ್ರ ಸರ್ಕಾರ 1.7 ಲಕ್ಷ ಕೋಟಿ ರೂ ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ಅನ್ನು ನಿಯಂತ್ರಿಸುವ ಮತ್ತು ಸೋಂಕು ಬಾದಿತ ಜನರಿಗೆ ಪರಿಹಾರ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಇಂದು 1.7 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದರು.
ಇದರಲ್ಲಿ ಪ್ರಮುಖವಾಗಿ ವೈದ್ಯಕೀಯ ಸಿಬಂದಿಗಳಿಗೆ, ಕೆಲಸ ಮಾಡುವ ಮಂದಿಗೆ 50 ಲಕ್ಷ ವಿಮೆ , ಬಡವರಿಗೆ ಮುಂದಿನ 3 ತಿಂಗಳಿಗೆ ಅಕ್ಕಿ ಹಾಗೂ ಗೋಧಿ ಉಚಿತವಾಗಿ ವಿತರಣೆ, ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಮೊದಲ ಕಂತು ತಕ್ಷಣ ಬಿಡುಗಡೆ , 2000 ರೂಪಾಯಿ ಉದ್ಯೋಗ ಖಾತ್ರಿ ಕಾರ್ಮಿಕರಿಗೆ ತಕ್ಷಣ ನೀಡುವುದು, ವೃದ್ಧರಿಗೆ 1000 ಸಹಾಯ ಧನ ಪಿಂಚಣಿ ಹೆಚ್ಚುವರಿ ಹಾಗೂ 8.3 ಕೋಟಿ ಮಂದಿಗೆ ಉಜ್ವಲ ಗ್ಯಾಸ್ ಯೋಜನೆ ಉಚಿತವಾಗಿ ಗ್ಯಾಸ್ ವಿತರಣೆ ಸೇರಿದೆ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…