ನವದೆಹಲಿ: ಕೊರೋನಾ ವೈರಸ್ ಹರಡುವುದು ತಡೆಗೆ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಇದೀಗ ಜನರಿಗೆ ತೊಂದರೆಯಾಗದಂತೆ ದೇಶದ ನಾಗರಿಕರಿಗೆ ಕೇಂದ್ರ ಸರ್ಕಾರ 1.7 ಲಕ್ಷ ಕೋಟಿ ರೂ ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ಅನ್ನು ನಿಯಂತ್ರಿಸುವ ಮತ್ತು ಸೋಂಕು ಬಾದಿತ ಜನರಿಗೆ ಪರಿಹಾರ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಇಂದು 1.7 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದರು.
ಇದರಲ್ಲಿ ಪ್ರಮುಖವಾಗಿ ವೈದ್ಯಕೀಯ ಸಿಬಂದಿಗಳಿಗೆ, ಕೆಲಸ ಮಾಡುವ ಮಂದಿಗೆ 50 ಲಕ್ಷ ವಿಮೆ , ಬಡವರಿಗೆ ಮುಂದಿನ 3 ತಿಂಗಳಿಗೆ ಅಕ್ಕಿ ಹಾಗೂ ಗೋಧಿ ಉಚಿತವಾಗಿ ವಿತರಣೆ, ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಮೊದಲ ಕಂತು ತಕ್ಷಣ ಬಿಡುಗಡೆ , 2000 ರೂಪಾಯಿ ಉದ್ಯೋಗ ಖಾತ್ರಿ ಕಾರ್ಮಿಕರಿಗೆ ತಕ್ಷಣ ನೀಡುವುದು, ವೃದ್ಧರಿಗೆ 1000 ಸಹಾಯ ಧನ ಪಿಂಚಣಿ ಹೆಚ್ಚುವರಿ ಹಾಗೂ 8.3 ಕೋಟಿ ಮಂದಿಗೆ ಉಜ್ವಲ ಗ್ಯಾಸ್ ಯೋಜನೆ ಉಚಿತವಾಗಿ ಗ್ಯಾಸ್ ವಿತರಣೆ ಸೇರಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…