ಸುಳ್ಯ: ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಮಂಗಳವಾರ ಜಿಲ್ಲಾಡಳಿತ ಅವಕಾಶ ನೀಡಿತ್ತು. ಹೀಗಾಗಿ ಸುಳ್ಯ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ಬಂದಿದ್ದರು. ಸರದಿ ಸಾಲು ಸಂಜೆ 3 ಗಂಟೆಯವರೆಗೂ ಮುಂದುವರಿದಿದೆ. ದಿನಸಿ ಖರೀದಿಗೆ ಗಂಟೆ ಗಟ್ಟಲೆ ಕಾದು ನಿಂತಿದ್ದರು. ಬೆಳಗ್ಗೆ 6 ಗಂಟೆಗೆ ದಿನಸಿ ಅಂಗಡಿ ತೆರೆದಿತ್ತು. ಮಧ್ಯಾಹ್ನ 3 ಗಂಟೆಯವರೆಗೆ ದಿನಸಿ ಖರೀದಿಗೆ ಅವಕಾಶ ನೀಡಿದ್ದರೂ ಇದುವರೆಗೂ ಸರದಿ ಸಾಲು ಹಲವು ಕಡೆಗಳಲ್ಲಿ ಮುಗಿದಿಲ್ಲ.
ಗುತ್ತಿಗಾರಿನಲ್ಲಿ ದಿನಸಿಗೆ ಕ್ಯೂ ನಿಂತವರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಪಂಚಾಯತ್ ವತಿಯಿಂದ ಮಾಡಲಾಯಿತು. ಇದೇ ವೇಳೆ ಸಂಕಷ್ಟದಲ್ಲಿರುವವರಿಗೆ ಅಕ್ಕಿ ವಿತರಣೆ ಮಾಡುವ ಕಾರ್ಯ ನಡೆಯಿತು. ಕಾರ್ಯಪಡೆ ಸದಸ್ಯರು ಹಾಗೂ ಪಂಚಾಯತ್ ಆಡಳಿತ ಮನೆ ಮನೆಗೆ ತೆರಳಿ ಅಕ್ಕಿ ವಿತರಣೆ ಮಾಡಿತು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…