Advertisement
ಸುದ್ದಿಗಳು

ಕೊರೊನಾ ಎಫೆಕ್ಟ್ | ಗರ್ಭಿಣಿಯನ್ನು ಆಸ್ಪತ್ರೆಯಿಂದ ಮನೆಗೆ ಸಾಗಿಸಲು ನೆರವಾದ ವಿಖಾಯ ಸದಸ್ಯರು |

Share

ಎಲಿಮಲೆ: ಕೊರೊನಾ ವೈರಸ್  ಹರಡುವ ಮುನ್ನಚ್ಚರಿಕಾ ಕ್ರಮವಾಗಿ ಭಾರತ ಲಾಕ್ ಡೌನ್ ಆಗಿದ್ದು, ಈ ಸಂದರ್ಭ ಗರ್ಭಿಣಿಯನ್ನು ಆಸ್ಪತ್ರೆಯಿಂದ ಮನೆಗೆ ಸಾಗಿಸಲು SKSSF ಎಲಿಮಲೆ ವಿಖಾಯ ಸದಸ್ಯರು ನೆರವಾಗಿದ್ದಾರೆ.

ಕಾವು ಸಮೀಪದ ಮಾಣಿಯಡ್ಕ ರಾಘವ್ ಅವರ ಪತ್ನಿ ಸುಶೀಲ ಎಂಬವರು ಗರ್ಭಿಣಿಯಾಗಿದ್ದು, ಪ್ರಸವ ದಿನಾಂಕ ಆಗಿಲ್ಲ ಎಂದು ಡಾಕ್ಟರುಗಳು ನಿರ್ದೇಶಿಸಿದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಮನೆಗೆ ಹಿಂದಿರುಗಲು ಬಂದ್ ಹಿನ್ನಲೆ ಕಷ್ಟವಾದ್ದರಿಂದ, ತಾಲೂಕು ವಿಖಾಯ ವಿಂಗ್ ಇದರ ಕಾರ್ಯದರ್ಶಿ ತಾಜುದ್ದೀನ್ ಟರ್ಲಿ ಅವರಿಗೆ ವಿಷಯ ತಿಳಿಸಿದ್ದು, ಅವರು ಸುಳ್ಯತಾಲೂಕು ವಿಖಾಯ ವಿಂಗ್ ಕನ್ವಿನರ್ ಆದ ಕಲಂದರ್ ಎಲಿಮಲೆಯವರೊಂದಿಗೆ ಚರ್ಚಿಸಿ ನಂತರ ಎಲಿಮಲೆ SKSSF ವಿಖಾಯ ವಿಂಗ್ ಸದಸ್ಯರಾದ ರಶೀದ್ ಎಲಿಮಲೆಗೆ ವಿಷಯ ತಿಳಿಸಿದ ಕೂಡಲೆ ಸ್ಪಂದಿಸಿ ರೋಗಿಯನ್ನು ಆಸ್ಪತ್ರೆಯಿಂದ ಮನೆಗೆ ಸಾಗಿಸಿದ್ದಾರೆ.

ಅದಲ್ಲದೆ ಕೊರೊನಾ ಭೀತಿಯಿಂದ ಜನರು ಹೆಚ್ಚು ಜಾಗೃತೆ ವಹಿಸುವ ಸಮಯದಲ್ಲಿ ತಮ್ಮ ಕಾರಿನ ಚಾಲಕ ಸೀಟನ್ನು ವಿಶೇಷ ತಂತ್ರಜ್ಞಾನದ ಮೂಲಕ ಹಿಂಬದಿ ಕೂತವರಿಗೆ ತೊಂದರೆಯಾಗದ ರೀತಿಯಲ್ಲಿ ಹೊದಿಕೆ ಮಾಡಿ ಕಾರನ್ನು ಚಲಾಯಿಸಿದ್ದಾರೆ.

ವಿದೇಶಿಯರು ರೋಗಿಯನ್ನು ಆಸ್ಪತ್ರೆಗೆ ಸಾಗಿಸಲು ಈ ತಂತ್ರಜ್ಞಾನವನ್ನು ಬಳಸಿದ್ದರು, ಇದರ ವೀಡಿಯೋ ನೋಡಿ ಈ ರೀತಿ ಸಿದ್ದಪಡಿಸಿದ್ದೇವೆ ಎಂದು ಎಲಿಮಲೆ ವಿಖಾಯ ಸದಸ್ಯ ರಶೀದ್ ಅವರು ತಮ್ಮ ಅಭಿಪ್ರಾಯವನ್ನು ವೆಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

4 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

4 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

13 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

14 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

24 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

1 day ago