Advertisement
ಸುದ್ದಿಗಳು

ಕೊರೊನಾ ಎಫೆಕ್ಟ್ | ಗರ್ಭಿಣಿಯನ್ನು ಆಸ್ಪತ್ರೆಯಿಂದ ಮನೆಗೆ ಸಾಗಿಸಲು ನೆರವಾದ ವಿಖಾಯ ಸದಸ್ಯರು |

Share

ಎಲಿಮಲೆ: ಕೊರೊನಾ ವೈರಸ್  ಹರಡುವ ಮುನ್ನಚ್ಚರಿಕಾ ಕ್ರಮವಾಗಿ ಭಾರತ ಲಾಕ್ ಡೌನ್ ಆಗಿದ್ದು, ಈ ಸಂದರ್ಭ ಗರ್ಭಿಣಿಯನ್ನು ಆಸ್ಪತ್ರೆಯಿಂದ ಮನೆಗೆ ಸಾಗಿಸಲು SKSSF ಎಲಿಮಲೆ ವಿಖಾಯ ಸದಸ್ಯರು ನೆರವಾಗಿದ್ದಾರೆ.

ಕಾವು ಸಮೀಪದ ಮಾಣಿಯಡ್ಕ ರಾಘವ್ ಅವರ ಪತ್ನಿ ಸುಶೀಲ ಎಂಬವರು ಗರ್ಭಿಣಿಯಾಗಿದ್ದು, ಪ್ರಸವ ದಿನಾಂಕ ಆಗಿಲ್ಲ ಎಂದು ಡಾಕ್ಟರುಗಳು ನಿರ್ದೇಶಿಸಿದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಮನೆಗೆ ಹಿಂದಿರುಗಲು ಬಂದ್ ಹಿನ್ನಲೆ ಕಷ್ಟವಾದ್ದರಿಂದ, ತಾಲೂಕು ವಿಖಾಯ ವಿಂಗ್ ಇದರ ಕಾರ್ಯದರ್ಶಿ ತಾಜುದ್ದೀನ್ ಟರ್ಲಿ ಅವರಿಗೆ ವಿಷಯ ತಿಳಿಸಿದ್ದು, ಅವರು ಸುಳ್ಯತಾಲೂಕು ವಿಖಾಯ ವಿಂಗ್ ಕನ್ವಿನರ್ ಆದ ಕಲಂದರ್ ಎಲಿಮಲೆಯವರೊಂದಿಗೆ ಚರ್ಚಿಸಿ ನಂತರ ಎಲಿಮಲೆ SKSSF ವಿಖಾಯ ವಿಂಗ್ ಸದಸ್ಯರಾದ ರಶೀದ್ ಎಲಿಮಲೆಗೆ ವಿಷಯ ತಿಳಿಸಿದ ಕೂಡಲೆ ಸ್ಪಂದಿಸಿ ರೋಗಿಯನ್ನು ಆಸ್ಪತ್ರೆಯಿಂದ ಮನೆಗೆ ಸಾಗಿಸಿದ್ದಾರೆ.

ಅದಲ್ಲದೆ ಕೊರೊನಾ ಭೀತಿಯಿಂದ ಜನರು ಹೆಚ್ಚು ಜಾಗೃತೆ ವಹಿಸುವ ಸಮಯದಲ್ಲಿ ತಮ್ಮ ಕಾರಿನ ಚಾಲಕ ಸೀಟನ್ನು ವಿಶೇಷ ತಂತ್ರಜ್ಞಾನದ ಮೂಲಕ ಹಿಂಬದಿ ಕೂತವರಿಗೆ ತೊಂದರೆಯಾಗದ ರೀತಿಯಲ್ಲಿ ಹೊದಿಕೆ ಮಾಡಿ ಕಾರನ್ನು ಚಲಾಯಿಸಿದ್ದಾರೆ.

ವಿದೇಶಿಯರು ರೋಗಿಯನ್ನು ಆಸ್ಪತ್ರೆಗೆ ಸಾಗಿಸಲು ಈ ತಂತ್ರಜ್ಞಾನವನ್ನು ಬಳಸಿದ್ದರು, ಇದರ ವೀಡಿಯೋ ನೋಡಿ ಈ ರೀತಿ ಸಿದ್ದಪಡಿಸಿದ್ದೇವೆ ಎಂದು ಎಲಿಮಲೆ ವಿಖಾಯ ಸದಸ್ಯ ರಶೀದ್ ಅವರು ತಮ್ಮ ಅಭಿಪ್ರಾಯವನ್ನು ವೆಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

13 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

13 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago