Advertisement
ಸುದ್ದಿಗಳು

ಕೊರೊನಾ ಏರಿಕೆಯ ಸುದ್ದಿಗಿಂತಲೂ ಜಾಗೃತಿಯ ಸುದ್ದಿ ಅಗತ್ಯವಿದೆ | ಬಸ್ಸು-ವ್ಯಾನ್ ಗಳಲ್ಲಿ ಬೇಕಿನ್ನೂ ಎಚ್ಚರ |

Share

ಕೊರೊನಾ ಏರಿಕೆಯ ಸುದ್ದಿ ದಿನವೂ ಕೇಳುತ್ತಲೇ….  ಆತಂಕವಾಗುತ್ತಲೇ ಇರುವ ಕಾಲ ಇನ್ನು ದೂರ ಮಾಡಬೇಕಿದೆ. ದೇಶದಲ್ಲಿ , ರಾಜ್ಯದಲ್ಲಿ , ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸರಕಾರಗಳು ಇದುವರೆಗೆ ಇನ್ನಿಲ್ಲದ  ಪ್ರಯತ್ನ ಮಾಡಿದವು. ಈಗ ಆರೋಪ, ಪ್ರತ್ಯಾರೋಪ, ರಾಜಕೀಯ ಎಲ್ಲವೂ ನುಸುಳುತ್ತದೆ. ಆದರೆ ಜನಸಾಮಾನ್ಯರಿಗೆ ಈ ರಾಜಕೀಯಗಳು ಅಗತ್ಯವೇ ಇಲ್ಲ. ಅವರಿಗೆ ಈಗ ಮತ್ತೆ ಬದುಕು ಕಟ್ಟುವ ಹೊತ್ತು. ಮಳೆಗಾಲ ಆರಂಭವಾಗಿದೆ. ಕೃಷಿಯಿಂದ ತೊಡಗಿ ಅನೇಕ ಕಾಯಕಗಳು ಬಾಕಿ ಉಳಿದಿವೆ.  ಇದುವರೆಗಿನ ಗೊಂದಲಗಳೇ ನಿವಾರಣೆ ಆಗಿಲ್ಲ.  ಇನ್ನು ಬೇಕಿರುವುದು  ಮುಂಜಾಗ್ರತೆ, ತನಗೂ, ತನ್ನ ಮನೆಯವರಿಗೂ ಕೊರೊನಾ ವೈರಸ್ ಬರದಂತೆ ಎಚ್ಚರಿಕೆ ವಹಿಸುವುದೊಂದೇ ದಾರಿ….


ಈಗಾಗಲೇ ಲಾಕ್ಡೌನ್ ಹಂತ ಮುಗಿಯುತ್ತಿದೆ. ಮುಂದೆ ಕೆಲವೊಂದು ನಿಯಮಗಳು ಯಥಾ ಪ್ರಕಾರ ಚಾಲ್ತಿಯಲ್ಲಿರಲೇಬೇಕಾಗಬಹುದು. ಆದರೆ ಜನಸಾಮಾನ್ಯರಿಗೆ ಇನ್ನಂತೂ ತುರ್ತು. ಮಳೆಗಾಲ ಆರಂಭವಾಗಿದೆ  ವಿವಿಧ ಅಗತ್ಯ ಕೆಲಸಗಳ ಕಡೆಗೆ ಗಮನಹರಿಸಲೇಬೇಕಿದೆ. ಇನ್ನೂ ಕೊರೊನಾ ಸುದ್ದಿ ಕೇಳುತ್ತಲೇ ಮನೆಯಲ್ಲೇ ಇರುವ ಕಾಲವನ್ನು  ದಾಟಿ ಬರಲೇಬೇಕಿದೆ. ಈಗ ಅಗತ್ಯವಾಗಿ ಬೇಕಿರುವುದು  ಮುಂಜಾಗ್ರತಾ ಕ್ರಮಗಳು. ನನಗೂ-ನನ್ನ ಮನೆಯವರಿಗೂ ಕೊರೊನಾ ವೈರಸ್ ಬಾರದಂತೆ ಏನು ಮಾಡಬಹುದು  ಎಂಬುದರ ಕಡೆಗೆ ಗಮನ.

ಈಗಾಗಲೇ ಬಸ್ಸು ಹಾಗೂ ಖಾಸಗಿ ವಾಹನಗಳ ಓಡಾಟ ಆರಂಭವಾಗಿದೆ. ಎಲ್ಲೆಡೆಯೂ ಮಾಸ್ಕ್ ಧರಿಸುತ್ತಲೇ ಓಡಾಟ ನಡೆಯುತ್ತಿದೆ. ಸಾರ್ವಜನಿಕ ಪ್ರದೇಶಗಳಲ್ಲಿ  ಕಡ್ಡಾಯವಾಗಿ ಮಾಸ್ಕ್ ಅಗತ್ಯ ಎಂದೂ ಸರಕಾರ ಹೇಳಿದೆ, ಇದಕ್ಕಾಗಿ ದಂಡ ಪ್ರಯೋಗಕ್ಕೂ ಮುಂದಾಗಿದೆ. ಆದರೆ ಖಾಸಗಿ ವಾಹನಗಳಲ್ಲಿ ಈಗ ಸಾರ್ವಜನಿಕರು ಸಾಮಾಜಿಕ ಅಂತರದ ಪ್ರಶ್ನೆಯೇ ಬರುತ್ತಿಲ್ಲ. ವ್ಯಾನ್ ಗಳಲ್ಲಿ, ಜೀಪುಗಳಲ್ಲಿ  ಫುಲ್ ರಶ್…!. ಸ್ಯಾನಿಟೈಸರ್ ಬಳಕೆ ಕಡಿಮೆ ಕಾಣುತ್ತದೆ.ಸಾರ್ವಜನಿಕ ವಾಹನ ಏರುವ ಮುನ್ನ ಸ್ಯಾನಿಟೈಸರ್ ಬಳಕೆ ಅಗತ್ಯವಾಗಿದೆ. ಆದರೆ ಬಳಕೆ ಕಾಣುತ್ತಿಲ್ಲ. ಒಂದು ವೇಳೆ ಬಸ್ಸು, ವ್ಯಾನ್ ಗಳಲ್ಲಿ  ಕಟ್ಟು ನಿಟ್ಟಿನ ಕ್ರಮಗಳು ಇಲ್ಲದೇ ಹೋದರೆ ಪ್ರತೀ ಗ್ರಾಮಗಳಲ್ಲೂ ಸಾಮಾನ್ಯ ವ್ಯಕ್ತಿಯೂ ಕೊರೊನಾ ಭಯಕ್ಕೆ ಒಳಗಾಗಬೇಕಾದ ಅನಿವಾರ್ಯತೆ ಇದೆ. ಇದರ ಬಗ್ಗೆ ಆಯಾ ಪಂಚಾಯತ್ ಗಳು ಏಕೆ ಗಮನಹರಿಸಬಾರದು ? ಎಂಬ ಪ್ರಶ್ನೆ ಇದೆ. ಪಂಚಾಯತ್ ಗಳು ತಮ್ಮ ಗ್ರಾಮಕ್ಕೆ ಸಾಮಾಜಿಕ ಮಾದರಿಯಲ್ಲಿ ವೈರಸ್ ಬಾರದಂತೆ ತಡೆಯಲು ಮುಂಜಾಗ್ರತಾ ಕ್ರಮಗಳ ಬಗ್ಗೆ ಹೆಚ್ಚು ಆಸಕ್ತಿ ವಹಿಸಬೇಕಿದೆ.  ಜನರು ತನಗೆ ಹಾಗೂ ತನ್ನ ಮನೆಯವರಿಗೆ ವೈರಸ್ ಬಾರದಂತೆ ಹೆಚ್ಚು ಗಮನಹರಿಸಬೇಕಿದೆ. ಇದೆರಡೂ ಪಾಲನೆಯಾದರೆ ಕೊರೊನಾ ವೈರಸ್ ಜೊತೆಯೇ ಬದುಕಲು ಸಾಧ್ಯವಿದೆ, ಕೊರೊನಾ ವೈರಸ್ ನಿವಾರಣೆಯೂ ಸಾಧ್ಯವಿದೆ.

ಈಗಾಗಲೇ ಕೊರೊನಾ ವೈರಸ್ ಗ್ರಾಮೀಣ ಭಾಗದಿಂದ ತೊಡಗಿ ನಗರದ ಉದ್ಯಮಗಳಿಗೂ ಸಾಕಷ್ಟು ಹೊಡೆತ ನೀಡಿದೆ. ಇನ್ನು  ಈ ಹೊಡೆತಗಳನ್ನು  ದಾಟಿ ಆರ್ಥಿಕತೆ ಸಹಜ ಸ್ಥಿತಿಯತ್ತ ಬರಲು ಯೋಜನೆ ರೂಪಿಸಲೇಬೇಕಾದ್ದರಿಂದ ಇನ್ನೂ ಕೊರೊನಾ ವೈರಸ್ ಭಯದಿಂದ , ಭಯಗೊಳಿಸುವ ದಾರಿಯಿಂದ ಹೊರಬರಬೇಕಿದೆ. ಇದಕ್ಕಾಗಿ ಪಂಚಾಯತ್ ಮಟ್ಟದಿಂದ ರಾಜ್ಯದವರೆಗೆ ನೂತನ ಯೋಜನೆಗಳು ಸಿದ್ಧವಾಗಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

6 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

6 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

15 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

16 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

1 day ago