ಸುಳ್ಯ: ಕೊರೊನಾ ವೈರಸ್ ಸೋಂಕಾದ ವ್ಯಕ್ತಿಗಳು ಹಾಗೂ ಕ್ವಾಂರೇಂಟೈನ್ ನಲ್ಲಿರುವ ಮಂದಿ ಹಾಗೂ ಅವರ ಕುಟುಂಬದ ಮಂದಿ ಸಹಜವಾಗಿಯೇ ಮಾನಸಿಕವಾಗಿ ನೊಂದಿರುತ್ತಾರೆ. ಇಂತಹವರಿಗೆ ಆನ್ ಲೈನ್ ಮೂಲಕ ನೆರವಾಗಲು, ಆಪ್ತಸಮಾಲೋಚನೆ ಮಾಡಲು ತಂಡ ಸಿದ್ಧವಾಗಿದೆ. ಬೆಂಗಳೂರಿನಲ್ಲಿ ಸೋಚರ ಸಂಸ್ಥೆಯ ಮೂಲಕ ರಚನೆಯಾಗಿರುವ ಕೌನ್ಸಿಲಿಂಗ್ ತಂಡವನ್ನು ಸುಳ್ಯದ ಅಕ್ಷರ ದಾಮ್ಲೆ ನಿರ್ವಹಿಸುತ್ತಿದ್ದು, ಸೋಚರ ಸಂಸ್ಥೆ ವ್ಯವಸ್ಥೆ ಮಾಡುತ್ತಿದೆ. ಎಲ್ಲಾ ವೈದ್ಯರು, ಆಪ್ತ ಸಮಾಲೋಚಕರು ಉಚಿತವಾಗಿ ಈಗ ಬಿಡುವು ಮಾಡಿಕೊಂಡು ಸಾರ್ವಜನಿಕ ಸೇವೆ ನಡೆಸುತ್ತಿದ್ದಾರೆ.
ಸೋಚರ ಎಂಬ ಸಂಸ್ಥೆ ಸುಮಾರು 30 ವರ್ಷಗಳಿಂದ ಸಾಮಾಜಿಕ ಸ್ವಾಸ್ಥ್ಯ ಹಾಗೂ ಸಾರ್ವಜನಿಕ ಆರೋಗ್ಯದ ಬಗ್ಗೆ ಕೆಲಸ ಮಾಡುತ್ತಿದೆ. ಇದೀಗ ಈ ಸಂಸ್ತೆ ಸಾರ್ವಜನಿಕ ಕಾಳಜಿಯಿಂದ ಕೊರೊನಾ ಭಯ ನಿವಾರಣೆ ಮಾಡಲು ಹಾಗೂ ಈ ವೈರಸ್ ಸೋಂಕಾಗಿರುವ ವ್ಯಕ್ತಿಗಳ, ಕುಟುಂಬದೊಂದಿಗೆ ಆಪ್ತ ಸಮನಾಲೋಚನೆ ನಡೆಸಿ ಧೈರ್ಯ ತುಂಬುವ ಕಾರ್ಯವನ್ನು ಅನ್ ಲೈನ್ ಮೂಲಕ ಮಾಡುತ್ತಿದೆ. ಇದಕ್ಕೆ ಸುಳ್ಯದ ಅಕ್ಷರ ದಾಮ್ಲೆ ಅವರನ್ನು ಸಂಪರ್ಕಿಸಿ ಅವರ ನೇತೃತ್ವದಲ್ಲಿ ಇದೀಗ ಸಮಾಲೋಚನಾ ಚಟುವಟಿಕೆ ಆರಂಭಿಸಲಾಗಿದೆ.
ಇದೀಗ 3 ವಿಭಾಗದಲ್ಲಿ ಕೆಲಸ ಮಾಡಲಾಗುತ್ತದೆ, ಕೋವಿಡ್-19 ಸೋಂಕಿಗೆ ಒಳಗಾದವರು , ಕೋವಿಡ್-19 ಕ್ವಾರಂಟೇನ್ ನಲ್ಲಿ ಇರುವವರು ಹಾಗೂ ಕುಟುಂಬದ ಸದಸ್ಯರಿಗೆ ಹಾಗೂ ಪ್ರತ್ಯೇಕವಾಗಿ ಹೀಗೆ 3 ವಿಭಾಗದಲ್ಲಿ ಆಪ್ತಸಮಾಲೋಚನೆ ನಡೆಸಲಾಗುತ್ತಿದೆ.
ಯಾವುದೇ ರೀತಿಯ ಸಹಾಯ ಬೇಕಿದ್ದರೆ, ಮಾಹಿತಿ ಬೇಕಿದ್ದರೆ ಈ ಕೆಳಗಿನ ಸಂಪರ್ಕದ ಸಂಖ್ಯೆಗೆ ಕರೆ ಮಾಡಬಹುದು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…