Advertisement
Uncategorized

#ಕೊರೊನಾ ಔಟ್ಬ್ರೇಕ್ | ಕೊರೊನಾ ವೈರಸ್ ಸೋಂಕಾದವರಿಗೆ ಭಯ ಬೇಡ | ನಡೆಯುತ್ತಿದೆ ಆನ್ ಲೈನ್ ಕೌನ್ಸಿಲಿಂಗ್ | ಸಕ್ರಿಯವಾಗಿ ತೊಡಗಿಸಿಕೊಂಡ ಸುಳ್ಯದ ಅಕ್ಷರ ದಾಮ್ಲೆ |

Share

ಸುಳ್ಯ: ಕೊರೊನಾ ವೈರಸ್ ಸೋಂಕಾದ ವ್ಯಕ್ತಿಗಳು ಹಾಗೂ ಕ್ವಾಂರೇಂಟೈನ್ ನಲ್ಲಿರುವ ಮಂದಿ ಹಾಗೂ ಅವರ ಕುಟುಂಬದ ಮಂದಿ ಸಹಜವಾಗಿಯೇ ಮಾನಸಿಕವಾಗಿ ನೊಂದಿರುತ್ತಾರೆ. ಇಂತಹವರಿಗೆ ಆನ್ ಲೈನ್ ಮೂಲಕ ನೆರವಾಗಲು, ಆಪ್ತಸಮಾಲೋಚನೆ ಮಾಡಲು ತಂಡ ಸಿದ್ಧವಾಗಿದೆ. ಬೆಂಗಳೂರಿನಲ್ಲಿ  ಸೋಚರ ಸಂಸ್ಥೆಯ ಮೂಲಕ ರಚನೆಯಾಗಿರುವ ಕೌನ್ಸಿಲಿಂಗ್   ತಂಡವನ್ನು ಸುಳ್ಯದ ಅಕ್ಷರ ದಾಮ್ಲೆ ನಿರ್ವಹಿಸುತ್ತಿದ್ದು, ಸೋಚರ ಸಂಸ್ಥೆ ವ್ಯವಸ್ಥೆ ಮಾಡುತ್ತಿದೆ. ಎಲ್ಲಾ ವೈದ್ಯರು, ಆಪ್ತ ಸಮಾಲೋಚಕರು ಉಚಿತವಾಗಿ ಈಗ ಬಿಡುವು ಮಾಡಿಕೊಂಡು ಸಾರ್ವಜನಿಕ ಸೇವೆ ನಡೆಸುತ್ತಿದ್ದಾರೆ.

ಸೋಚರ ಎಂಬ ಸಂಸ್ಥೆ ಸುಮಾರು 30 ವರ್ಷಗಳಿಂದ ಸಾಮಾಜಿಕ ಸ್ವಾಸ್ಥ್ಯ ಹಾಗೂ ಸಾರ್ವಜನಿಕ ಆರೋಗ್ಯದ ಬಗ್ಗೆ ಕೆಲಸ ಮಾಡುತ್ತಿದೆ. ಇದೀಗ ಈ ಸಂಸ್ತೆ ಸಾರ್ವಜನಿಕ ಕಾಳಜಿಯಿಂದ ಕೊರೊನಾ ಭಯ ನಿವಾರಣೆ ಮಾಡಲು ಹಾಗೂ ಈ ವೈರಸ್ ಸೋಂಕಾಗಿರುವ ವ್ಯಕ್ತಿಗಳ, ಕುಟುಂಬದೊಂದಿಗೆ ಆಪ್ತ ಸಮನಾಲೋಚನೆ ನಡೆಸಿ ಧೈರ್ಯ ತುಂಬುವ ಕಾರ್ಯವನ್ನು ಅನ್ ಲೈನ್ ಮೂಲಕ ಮಾಡುತ್ತಿದೆ. ಇದಕ್ಕೆ ಸುಳ್ಯದ ಅಕ್ಷರ ದಾಮ್ಲೆ ಅವರನ್ನು  ಸಂಪರ್ಕಿಸಿ ಅವರ ನೇತೃತ್ವದಲ್ಲಿ  ಇದೀಗ ಸಮಾಲೋಚನಾ ಚಟುವಟಿಕೆ ಆರಂಭಿಸಲಾಗಿದೆ.

ಇದೀಗ 3 ವಿಭಾಗದಲ್ಲಿ  ಕೆಲಸ ಮಾಡಲಾಗುತ್ತದೆ, ಕೋವಿಡ್-19 ಸೋಂಕಿಗೆ ಒಳಗಾದವರು , ಕೋವಿಡ್-19 ಕ್ವಾರಂಟೇನ್ ನಲ್ಲಿ ಇರುವವರು ಹಾಗೂ ಕುಟುಂಬದ ಸದಸ್ಯರಿಗೆ ಹಾಗೂ ಪ್ರತ್ಯೇಕವಾಗಿ ಹೀಗೆ 3 ವಿಭಾಗದಲ್ಲಿ ಆಪ್ತಸಮಾಲೋಚನೆ ನಡೆಸಲಾಗುತ್ತಿದೆ.

ಯಾವುದೇ ರೀತಿಯ ಸಹಾಯ ಬೇಕಿದ್ದರೆ, ಮಾಹಿತಿ ಬೇಕಿದ್ದರೆ ಈ ಕೆಳಗಿನ ಸಂಪರ್ಕದ ಸಂಖ್ಯೆಗೆ ಕರೆ ಮಾಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

18 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago