ಸುಳ್ಯ: ತಾಲೂಕಿನಲ್ಲಿ ಇದುವರೆಗೆ ಯಾವುದೇ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿಲ್ಲ. ಆದರೆ ಇದೇ ರೀತಿಯಾಗಿ ಮುಂಜಾಗ್ರತಾ ಕ್ರಮಗಳು ಇನ್ನೂ 15 ದಿನಗಳ ಕಾಲ ಅಗತ್ಯವಿದೆ. ಅನಗತ್ಯವಾಗಿ ಸುಳ್ಳು ಸುದ್ದಿ ಹಾಗು ವದಂತಿ ಹಬ್ಬಿಸಬೇಡಿ. ಭಯದ ಬದಲಾಗಿ ಜಾಗೃತಿ ಇರಲಿ ಎಂದು ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಹೇಳಿದೆ.
ವಿದೇಶದಿಂದ ಬಂದವರನ್ನು ಈಗಾಗಲೆ ಕ್ವಾರಂಟೇನ್ ನಲ್ಲಿ ಇರಲು ಸೂಚಿಸಿದೆ. ವಿದೇಶದಿಂದ ಬಂದು ಅನಾರೋಗ್ಯಕ್ಕೆ ಒಳಗಾದವರ ರಕ್ತದ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಇದುವರಗೆ ಕೊರೊನಾ ವೈರಸ್ ಪಾಸಿಟಿವ್ ಬರಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಇದೇ ರೀತಿ ಮುಂದುವರಿಸಿಕೊಂಡು ಕಡ್ಡಾಯವಾಗಿ ಹೊಗಬೇಕಿದೆ. ವಿದೇಶದಿಂದ ಹಾಗೂ ಹೊರಜಿಲ್ಲೆಗಳಿಂದ ಬಂದವರಿಗೆ ಯಾರಿಗಾದರೂ ಜ್ವರ, ಶೀತ, ಕಫ ಇದ್ದರೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ಯಾವುದೇ ಭಯವಿಲ್ಲದೆ ಭೇಟಿ ನೀಡಬೇಕಿದೆ. ಸ್ಥಳೀಯರು ಈ ಬಗ್ಗೆ ನಿಗಾ ಇಡಬೇಕಿದೆ.
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…
ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…