ಸುಳ್ಯ: ತಾಲೂಕಿನಲ್ಲಿ ಇದುವರೆಗೆ ಯಾವುದೇ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿಲ್ಲ. ಆದರೆ ಇದೇ ರೀತಿಯಾಗಿ ಮುಂಜಾಗ್ರತಾ ಕ್ರಮಗಳು ಇನ್ನೂ 15 ದಿನಗಳ ಕಾಲ ಅಗತ್ಯವಿದೆ. ಅನಗತ್ಯವಾಗಿ ಸುಳ್ಳು ಸುದ್ದಿ ಹಾಗು ವದಂತಿ ಹಬ್ಬಿಸಬೇಡಿ. ಭಯದ ಬದಲಾಗಿ ಜಾಗೃತಿ ಇರಲಿ ಎಂದು ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಹೇಳಿದೆ.
ವಿದೇಶದಿಂದ ಬಂದವರನ್ನು ಈಗಾಗಲೆ ಕ್ವಾರಂಟೇನ್ ನಲ್ಲಿ ಇರಲು ಸೂಚಿಸಿದೆ. ವಿದೇಶದಿಂದ ಬಂದು ಅನಾರೋಗ್ಯಕ್ಕೆ ಒಳಗಾದವರ ರಕ್ತದ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಇದುವರಗೆ ಕೊರೊನಾ ವೈರಸ್ ಪಾಸಿಟಿವ್ ಬರಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಇದೇ ರೀತಿ ಮುಂದುವರಿಸಿಕೊಂಡು ಕಡ್ಡಾಯವಾಗಿ ಹೊಗಬೇಕಿದೆ. ವಿದೇಶದಿಂದ ಹಾಗೂ ಹೊರಜಿಲ್ಲೆಗಳಿಂದ ಬಂದವರಿಗೆ ಯಾರಿಗಾದರೂ ಜ್ವರ, ಶೀತ, ಕಫ ಇದ್ದರೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ಯಾವುದೇ ಭಯವಿಲ್ಲದೆ ಭೇಟಿ ನೀಡಬೇಕಿದೆ. ಸ್ಥಳೀಯರು ಈ ಬಗ್ಗೆ ನಿಗಾ ಇಡಬೇಕಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…