ಸುಳ್ಯ: ತಾಲೂಕಿನಲ್ಲಿ ಇದುವರೆಗೆ ಯಾವುದೇ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿಲ್ಲ. ಆದರೆ ಇದೇ ರೀತಿಯಾಗಿ ಮುಂಜಾಗ್ರತಾ ಕ್ರಮಗಳು ಇನ್ನೂ 15 ದಿನಗಳ ಕಾಲ ಅಗತ್ಯವಿದೆ. ಅನಗತ್ಯವಾಗಿ ಸುಳ್ಳು ಸುದ್ದಿ ಹಾಗು ವದಂತಿ ಹಬ್ಬಿಸಬೇಡಿ. ಭಯದ ಬದಲಾಗಿ ಜಾಗೃತಿ ಇರಲಿ ಎಂದು ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಹೇಳಿದೆ.
ವಿದೇಶದಿಂದ ಬಂದವರನ್ನು ಈಗಾಗಲೆ ಕ್ವಾರಂಟೇನ್ ನಲ್ಲಿ ಇರಲು ಸೂಚಿಸಿದೆ. ವಿದೇಶದಿಂದ ಬಂದು ಅನಾರೋಗ್ಯಕ್ಕೆ ಒಳಗಾದವರ ರಕ್ತದ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಇದುವರಗೆ ಕೊರೊನಾ ವೈರಸ್ ಪಾಸಿಟಿವ್ ಬರಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಇದೇ ರೀತಿ ಮುಂದುವರಿಸಿಕೊಂಡು ಕಡ್ಡಾಯವಾಗಿ ಹೊಗಬೇಕಿದೆ. ವಿದೇಶದಿಂದ ಹಾಗೂ ಹೊರಜಿಲ್ಲೆಗಳಿಂದ ಬಂದವರಿಗೆ ಯಾರಿಗಾದರೂ ಜ್ವರ, ಶೀತ, ಕಫ ಇದ್ದರೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ಯಾವುದೇ ಭಯವಿಲ್ಲದೆ ಭೇಟಿ ನೀಡಬೇಕಿದೆ. ಸ್ಥಳೀಯರು ಈ ಬಗ್ಗೆ ನಿಗಾ ಇಡಬೇಕಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…