ಸುಳ್ಯ: ತಾಲೂಕಿನಲ್ಲಿ ಇದುವರೆಗೆ ಯಾವುದೇ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿಲ್ಲ. ಆದರೆ ಇದೇ ರೀತಿಯಾಗಿ ಮುಂಜಾಗ್ರತಾ ಕ್ರಮಗಳು ಇನ್ನೂ 15 ದಿನಗಳ ಕಾಲ ಅಗತ್ಯವಿದೆ. ಅನಗತ್ಯವಾಗಿ ಸುಳ್ಳು ಸುದ್ದಿ ಹಾಗು ವದಂತಿ ಹಬ್ಬಿಸಬೇಡಿ. ಭಯದ ಬದಲಾಗಿ ಜಾಗೃತಿ ಇರಲಿ ಎಂದು ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಹೇಳಿದೆ.
ವಿದೇಶದಿಂದ ಬಂದವರನ್ನು ಈಗಾಗಲೆ ಕ್ವಾರಂಟೇನ್ ನಲ್ಲಿ ಇರಲು ಸೂಚಿಸಿದೆ. ವಿದೇಶದಿಂದ ಬಂದು ಅನಾರೋಗ್ಯಕ್ಕೆ ಒಳಗಾದವರ ರಕ್ತದ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಇದುವರಗೆ ಕೊರೊನಾ ವೈರಸ್ ಪಾಸಿಟಿವ್ ಬರಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಇದೇ ರೀತಿ ಮುಂದುವರಿಸಿಕೊಂಡು ಕಡ್ಡಾಯವಾಗಿ ಹೊಗಬೇಕಿದೆ. ವಿದೇಶದಿಂದ ಹಾಗೂ ಹೊರಜಿಲ್ಲೆಗಳಿಂದ ಬಂದವರಿಗೆ ಯಾರಿಗಾದರೂ ಜ್ವರ, ಶೀತ, ಕಫ ಇದ್ದರೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ಯಾವುದೇ ಭಯವಿಲ್ಲದೆ ಭೇಟಿ ನೀಡಬೇಕಿದೆ. ಸ್ಥಳೀಯರು ಈ ಬಗ್ಗೆ ನಿಗಾ ಇಡಬೇಕಿದೆ.
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…