ಸುಳ್ಯ: ತಾಲೂಕಿನಲ್ಲಿ ಇದುವರೆಗೆ ಯಾವುದೇ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿಲ್ಲ. ಆದರೆ ಇದೇ ರೀತಿಯಾಗಿ ಮುಂಜಾಗ್ರತಾ ಕ್ರಮಗಳು ಇನ್ನೂ 15 ದಿನಗಳ ಕಾಲ ಅಗತ್ಯವಿದೆ. ಅನಗತ್ಯವಾಗಿ ಸುಳ್ಳು ಸುದ್ದಿ ಹಾಗು ವದಂತಿ ಹಬ್ಬಿಸಬೇಡಿ. ಭಯದ ಬದಲಾಗಿ ಜಾಗೃತಿ ಇರಲಿ ಎಂದು ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಹೇಳಿದೆ.
ವಿದೇಶದಿಂದ ಬಂದವರನ್ನು ಈಗಾಗಲೆ ಕ್ವಾರಂಟೇನ್ ನಲ್ಲಿ ಇರಲು ಸೂಚಿಸಿದೆ. ವಿದೇಶದಿಂದ ಬಂದು ಅನಾರೋಗ್ಯಕ್ಕೆ ಒಳಗಾದವರ ರಕ್ತದ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಇದುವರಗೆ ಕೊರೊನಾ ವೈರಸ್ ಪಾಸಿಟಿವ್ ಬರಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಇದೇ ರೀತಿ ಮುಂದುವರಿಸಿಕೊಂಡು ಕಡ್ಡಾಯವಾಗಿ ಹೊಗಬೇಕಿದೆ. ವಿದೇಶದಿಂದ ಹಾಗೂ ಹೊರಜಿಲ್ಲೆಗಳಿಂದ ಬಂದವರಿಗೆ ಯಾರಿಗಾದರೂ ಜ್ವರ, ಶೀತ, ಕಫ ಇದ್ದರೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ಯಾವುದೇ ಭಯವಿಲ್ಲದೆ ಭೇಟಿ ನೀಡಬೇಕಿದೆ. ಸ್ಥಳೀಯರು ಈ ಬಗ್ಗೆ ನಿಗಾ ಇಡಬೇಕಿದೆ.
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…